ಬುಧವಾರ, ಜುಲೈ 31, 2024

ಹವಮಾನ ಇಲಾಖೆಯ ಅಲರ್ಟ್



 ಸುದ್ದಿಲೈವ್


01.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಹೇಗಿರಲಿದೆ ಎಂಬ ಮುನ್ಸೂಚನೆಯನ್ನ ಹವಮಾನ ಇಲಾಖೆ ಪ್ರಕಟಿಸಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಮಲೆನಾಡು ಭಾಗಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚೆನೆ ಇದೆ. ಕೊಡಗು ಹಾಗೂ ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಮೂಡಿಗೆರೆ ಭಾಗಗಳಲ್ಲಿ ಮಳೆ ಹೆಚ್ಚಾಗಿ ಸುರಿಯುವ ಮುನ್ಸೂಚನೆ ಇಧ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿಯೂ ಹೆಚ್ಚಾಗಿ ಬೀಳುವ ನಿರೀಕ್ಷೆ ಇಧ , ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ದಾವಣಗೆರೆ, ಹಾವೇರಿ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ ಎಂದು ಹವಮಾನ ಇಲಾಖೆ ಮನ್ಸೂಚನೆ ನೀಡಿದೆ. 


ನಿನ್ನೆಯ ಮಳೆಯ ಅನಿರೀಕ್ಷಿತವಾಗಿತ್ತು. ಆಗಾಧ ಪ್ರಮಾಣದ ಮೋಡ ಹಾಗೂ ಅತಿ ಭಾರಿ ಮಳೆಗೆ ಬೇರೆಯದೇ ವೈಜ್ಞಾನಿಕ ಕಾರಣಗಳಿರಬಹುದು. ಸಾಮಾನ್ಯ ಮುಂಗಾರು ಆಗಿರಲಾರದು ಎಂದು ಹೇಳಲಾಗುತ್ತಿದೆ. 

ಈಗಿನಂತೆ ಆಗಷ್ಟ್ 2ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಹಿತ ಇರಬಹುದು).


ಮುಂಗಾರು ದುರ್ಬಲ


ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರ ಗಮನಿಸುವಾಗ ಈ ಪ್ರಶ್ನೆ ಉದ್ಭವಿಸುತ್ತಿದೆ. ಮಾರುತಗಳು ಮಂದವಾಗಿ ದುರ್ಬಲಗೊಂಡತೆ ಗೋಚರಿಸುತ್ತಿದೆ.


ಇದನ್ನೂ ಓದಿ-https://www.suddilive.in/2024/07/blog-post_753.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ