ಸೆ.1 ರಂದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಸೆ.01 ರಂದು ವಿದ್ಯಾನಗರ ಮುಖ್ಯ ರಸ್ತೆಯಲ್ಲಿರುವ 11 ಕೆ.ವಿ ವಿದ್ಯುತ್ ಮಾರ್ಗದ ಮೇಲೆ ಮರ ಬೀಳುವ ಸ್ಥಿತಿಯಲ್ಲಿದ್ದು, ಮರ ಕಡಿತಲೆಗೊಳಿಸುವ ಕಾಮಗಾರಿ ಇರುವುದರಿಂದ ಮಾಧ್ಯಹ್ನ 2.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

 

ವಿದ್ಯಾನಗರ, ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ,ಟ್ಯಾಂಕ್ ಬಂಡ್ ರಸ್ತೆ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ, ಮೀನಾಕ್ಷಿ ಭವನ, ಮಹಾನಗರ ಪಾಲಿಕೆ, ಕುವೆಂಪು ರಂಗಮAದಿರ, ಡಿವಿಎಸ್ ವೃತ್ತ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು