ಔಷಧ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷ-ಯವಕ ಸಾವು

 


ಸುದ್ದಿಲೈವ್/ಸೊರಬ

ತೋಟದಲ್ಲಿ ಅಡಿಕೆ (Areca) ಮರಗಳಿಗೆ ಔಷಧ ಸಿಂಪಡಿಸುವ ವೇಳೆ ವಿದ್ಯುತ್‌ ಪ್ರವಹಿಸಿ ರೈತ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.


ಅಡಿಕೆ ಮರಗಳ ಹಿಂಗಾರಕ್ಕೆ ಕೊಳೆ ಔಷಧ ಸಿಂಪಡಿಸುವಾಗ ವಿದ್ಯುತ್ ತಂತಿಗೆ ಕೊಳೆ ಔಷಧ ತಗುಲಿದೆ. ಅದರಿಂದ ವಿದ್ಯುತ್‌ ಪ್ರವಹಿಸಿ ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ (35) ಮೃತಪಟ್ಟಿದ್ದಾರೆ


ತಂದೆ ಮತ್ತು ಅಣ್ಣನ ಜತೆ ಭಾನುವಾರ ಓಟೂರು ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ಸಿಂಪಡಿಸುವ ಔಷಧ ತಂತಿಗೆ ತಗುಲಿದೆ. ಔಷಧ ಸಿಂಪಡಿಸುವ ಪೈಪ್‌ನಿಂದ ವಿದ್ಯುತ್ ಪಸರಿಸಿದ ಪರಿಣಾಮ ಶ್ರೀಕಾಂತ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲ್ಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು