ಮಂಗಳವಾರ, ಆಗಸ್ಟ್ 20, 2024

ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

 


ಸುದ್ದಿಲೈವ್/ಸಾಗರ


ತಾಲ್ಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. 


ತಾಲ್ಲೂಕಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕನಾಗಿದ್ದಾನೆ. ಜಡ್ಡಿನಬೈಲು ಶರಾವತಿ ಹಿನ್ನೀರಿನಲ್ಲಿ ಮೀನುಗಾರ ರವಿ ಎಂಬುವವರು ಸೋಮವಾರ ಸಂಜೆ ಮೀನಿಗಾಗಿ ಬಲೆ ಹಾಕಿ ಬಂದಿದ್ದರು. 


ಮಂಗಳವಾರ ಬೆಳಿಗ್ಗೆ ಬಲೆ ತೆಗೆಯಲು ಹಿನ್ನೀರಿಗೆ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. 
ವಿಪರೀತ ಮಳೆಯಿಂದಾಗಿ ಶರಾವತಿ ಹಿನ್ನೀರಿನಲ್ಲಿ ರಭಸ ಹೆಚ್ಚಿದ್ದು, ಜೊತೆಗೆ ಮರಮಟ್ಟಿ ವಿಪರೀತವಾಗಿದೆ. 

ಮರಮಟ್ಟಿಗಳಿಗೆ ಬಲೆ ಸಿಕ್ಕಿದ್ದನ್ನು ರವಿ ಬಿಡಿಸಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ