ಹುಕ್ಕಾಬಾರ್ ಮೇಲೆ ದಾಳಿ

 


ಸುದ್ದಿಲೈವ್/ಶಿವಮೊಗ್ಗ


ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ.


ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು