ಮಂಗಳವಾರ, ಆಗಸ್ಟ್ 20, 2024

ಬೆಚ್ಚಿ ಬೀಳಿಸುವ ವಿಡಿಯೋ ವೈರಲ್-ಅರಣ್ಯ ಇಲಾಖೆಯಿಂದ ಸ್ಪಷ್ಟನೆ

 


ಸುದ್ದಿಲೈವ್/ಶಿವಮೊಗ್ಗ


ಕರಡಿಯನ್ನ ಹೊಡೆದು ಕೊಂದು ಹಾಕಿರುವ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಗೊಲ್ಲರಹಟ್ಟಿಯ ದೃಶ್ಯ ಎಂದು ಬಿಂಬಿಸಲಾಗಿದೆ.


ಆದರೆ ಅರಣ್ಯ ಇಲಾಖೆಯು ಇದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿಯ ಯಾವುದೇ ಗ್ರಾಮದಲ್ಲಿ ಈ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲವರು ವಾಟ್ಸಪ್ ಸ್ಟೇಟಸ್ ಗೆ ಈ ವಿಡಿಯೋ ಹಾಕಿಕೊಂಡಿರುವುದಾಗಿ ತಿಳಿದು ಬಂದಿದೆ. ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ ಎಂದು ಬಿಂಬಿಸಿ ವಾಟ್ಸಪ್ ಸ್ಟೇಟಸ್ ಗೆ ಕೆಲ ಯುವಕರು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದ್ದು, ಈ ರೀತಿಯ ಯಾವುದೇ ಘಟನೆ ನಡೆದಿಲ್ಲವೆಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದ್ದಾರೆ.



ತೆಂಗಿನ ತೋಟಕ್ಕೆ ನುಗ್ಗಿದ ಕರಡಿಯನ್ನ ಸ್ಥಳೀಯ ಗ್ರಾಮಸ್ಥರು ಹೊಡೆದು ಕೊಲ್ಲುವ ಪ್ರಯತ್ನ ನಡೆಸಿದ್ದಾರೆ. ಹೊಡೆಯುವ ವೇಳೆ ಯುವಕನ ಮೈಮೇಲೆ ಎಗರಿದ ಕರಡಿ ಆತನನ್ನ ಕಚ್ಚುತ್ತದೆ. ಆ ವೇಳೆ ಸ್ಥಳೀಯರು ದೊಣ್ಣೆ ಹಿಡಿದು ಮತ್ತು ಕೆಲವರು ಎಳನೀರು ಬಿಸಾಕಿ ಸಾಯಿಸಿದ್ದಾರೆ.


ಈ ವಿಡಿಯೋ ಭದ್ರಾವತಿ ತಾಲೂಲು ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿರುವುದಾಗಿ ಬಿಂಬಿಸಲಾಗಿದೆ. ಆದರೆ ಅರಣ್ಯ ಅಧಿಕಾರಿಗಳು ಈ ವಿಡಿಯೋ ಉತ್ತರ ಭಾರತದ ಕಡೆಯಲ್ಲಿ ನಡೆದಘಟನೆ ಎಂದು ಸ್ಪಷ್ಟಪಡಿಸಿದೆ. ಈವಿಡಿಯೋವನ್ನ ವೈರಲ್ ಮಾಡುವ ಮುನ್ನ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ