ಗುರುವಾರ, ಆಗಸ್ಟ್ 1, 2024

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ



ಸುದ್ದಿಲೈವ್/ಭದ್ರಾವತಿ


ಭದ್ರಾ ಮೇಲ್ದಂಡೆಯಿಂದ ಚಿತ್ರದುರ್ಗದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಕಾಲುವೆ ಮತ್ತು ಹಳ್ಳದ ಪಾತ್ರದ ಜನ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ


ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಯ ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ,  ಅಜ್ಜಂಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ದಿ: 31-07-2024 ರಿಂದ ಶಾಂತಿಪುರ ಪಂಪ್‌ಹೌಸ್-1, 



ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್‌ಹೌಸ್-2 ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ  ಹೆಬ್ಬೂರು, ಕಾಟಿನಗೆರೆ, ಬೆಣಕುಣಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್.ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಮರ ಗ್ರಾಮಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗಿದೆ.


ಆದ್ದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ನಿಷೇಧಿಸಲಾಗಿದೆ. 


ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರಬಾಗಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕರ ಗಮನಕ್ಕೆ  ತರಲಾಗಿದೆ ಎಂದು ಸುಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ