ಪ್ರಧಾನಿ ಮೋದಿ ಹುಟ್ಟುಹಬ್ಬ, ರಕ್ತದಾನ ಶಿಬಿರ ಡಾ.ಸರ್ಜಿ ಭಾಗಿ


ಸುದ್ದಿಲೈವ್/ಶಿವಮೊಗ್ಗ


ಭದ್ರಾವತಿ ತಾಲ್ಲೂಕು ಭಾರತೀಯ ಜನತಾ ಪಾರ್ಟಿಯ ಹೊಳೆಹೊನ್ನೂರು ಯುವ ಮೋರ್ಚಾ ವತಿಯಿಂದ ಮಂಗಳವಾರ ಸನ್ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಜೀ ಅವರ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ ನಡೆದಿದೆ. 


ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಮಾರಶೆಟ್ಟಿ ಹಳ್ಳಿಯ ಪ್ರಾಥಮಿಕ ರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, 


ಹೊಳೆಹೊನ್ನೂರು ಬಿಜೆಪಿ ಮಂಡಲ ಅಧ್ಯಕ್ಷರಾದ ಮಲ್ಲೇಶಪ್ಪ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಪಟೇಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಹರ್ಷಿತಾ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.,

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು