ಗುರುವಾರ, ಸೆಪ್ಟೆಂಬರ್ 5, 2024

ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗುವಿನ ದಾರುಣ ಸಾವು!




ಸುದ್ದಿಲೈವ್/ಶಿಕಾರಿಪುರ


ಮನೆಯಲ್ಲಿ ಆಟವಾಡುವ ವೇಳೆ, ಒಂದೂವರೆ ವರ್ಷದ ಮಗುವೊಂದು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ನಡೆದಿದೆ.


ತಾಲೂಕಿನ ಹರಗುವಳ್ಳಿ ಗ್ರಾಮ  ದಲ್ಲಿ ಈ ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.


ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು ಅದು ಗಂಟಲಲ್ಲಿ ಸಿಲುಕಿ ಬಿದ್ದಿದೆ. ಮುಗುವಿನ ಉಸಿರಾಟದಲ್ಲಿ ಏರುಪೇರಾಗಿದೆ. ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ