ಮಂಗಳವಾರ, ಸೆಪ್ಟೆಂಬರ್ 10, 2024

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

 


ಸುದ್ದಿಲೈವ್/ಶಿವಮೊಗ್ಗ


ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳೆಯೊಬ್ಬಳು ವಿಷ ಸೇವಿಸಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಭದ್ರಾವತಿಯ ದಾನವಾಡಿಯ ಜೈಲಕ್ಷ್ಮಿ ಮತ್ತು ಚರಣ್ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಇದಾದ ನಂತರ ಗಂಡನ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.


ಭದ್ರಾವತಿಯ ದಾನವಾಡಿಯಲ್ಲಿದ್ದ ಜೈಲಕ್ಷ್ಮಿ ಅವರು ಕೌಟುಂಬಿಕ ಕಲಹವನ್ನ ತಿಳಿಗೊಳಿಸಿ ಎಂದು ಗಂಡನ ಊರಾದ ಆನಂದಪುರದ ದಾಸನಕೊಪ್ಪದ ದೇವಸ್ಥಾನಕ್ಕೆ ಮನವಿ ಮಾಡಿದ್ದರು. ನಿಗದಿಯಾದ ದಿನಾಂಕದ ಮಧ್ಯಾಹ್ನ 2 ಗಂಟೆಗೆ ಇತ್ಯಾರ್ಥಗೊಳಿಸಲಾಗಿತ್ತು.


ಆದರೆ ಮಾವ ಸುಧಾಕರ್ ಹೋಗಿ ಗಲಾಟೆ ಮಾಡಿದ ಪರಿಣಾಮ ಸೊಸೆ ಜೈಲಕ್ಷ್ಮಿ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಮಾವನೂ ಸಹ ಫಿನಾಯಿಲ್ ಸೇವಿಸಿರುವುದಾಗಿ ಹೇಳಲಾಗುತ್ತಿದೆ. ಇಬ್ಬರೂ ಮೆಗ್ಗಾನ್ ಗೆ ದಾಖಲಾಗಿದ್ದಾರೆ. 


ಮಹಿಳೆಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿರುವ ವಿರುದ್ಧ ಡಿಎಸ್‌ಎಸ್ ಜಿಲ್ಲಾ ಘಟಕ ಖಂಡಿಸಿದೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ