ಬುಧವಾರ, ಸೆಪ್ಟೆಂಬರ್ 11, 2024

ಹಕ್ಕುಪತ್ರ ನೀಡಿ ಇಲ್ಲವಾದರೆ ಮುಂದಿನ ದಿನಗಳ್ಲಿ ಕಟ್ಟಡ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ

 


ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗ ತಾಲ್ಲೂಕಿನ ರಾಮೆನಕೊಪ್ಪದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ಮನೆಗಳಿಗೆ ಹಕ್ಕುಪತ್ರ ನೀಡಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ನಿವೇಶನ ಹಂಚುವಂತೆ ಒತ್ತಾಯಿಸಿ ಕನ್ನಡ ಕಟ್ಟಡ ಕಾರ್ಮಿಕ ಸಂಘಟನೆಯ ವಾಟಾಳ್ ಮಂಜು ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.


ಶಿವಮೊಗ್ಗ ತಾಲ್ಲೂಕಿನ ರಾಮೇನಕೊಪ್ಪದಲ್ಲಿ ಹಲವಾರು ವರ್ಷಗಳಿಂದ ಹಿಂದುಳಿದ ವರ್ಗಗಳ ಜನಾಂಗಗಳು ದಿನನಿತ್ಯ ಕೂಲಿ ಮಾಡಿ ವಾಸಿಸುತ್ತಿದ್ದು, ಇವರಿಗೆ ಮನೆ ಕಟ್ಟಲು ಜಾಗವಿಲ್ಲದೇ ಸರ್ಕಾರಿ ಹಾಗದಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ.


ಇವರು ಮೂಲ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಇದುವರೆಗೂ ಸರ್ಕಾರದಿಂದ ಅವರು ಕಟ್ಟಿಕೊಂಡಿರುವ ಮನೆಗಳಿಗೆ ಹಕ್ಕುಪತ್ರ ಸಹ ನೀಡಿಸುವುದಿಲ್ಲ. ಹಲವಾರು ಜಾತಿ ಜನಾಂಗಗಳು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರೂ ಅವರಿಗೆ ಗ್ರಾಮ ಪಂಚಾಯಿತಿಯಿಂದ ಸೈಟ್ ಗಳನ್ನು ಸಹ ಹಂಚಿಕೆ ಮಾಡಿರುವುದಿಲ್ಲ.


ಆದ್ದರಿಂದ,  ಕಟ್ಟಿರುವ ಮನೆಗಳಿಗೆ ಹಕ್ಕುಪತ್ರ ನೀಡಿ ಹಾಗೂ ಸೂರಿಲ್ಲದವರಿಗೆ ಸೂರು ಕಟ್ಟಲು ಅನುಕೂಲ ಮಾಡಿಕೊಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ತಹಶೀಲ್ದಾರ್ ಕಛೇರಿಯ ಎದುರು ಬೃಹತ್ ಪ್ರತಿಭಟನೆ, ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.‌

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ