ಬುಧವಾರ, ಸೆಪ್ಟೆಂಬರ್ 4, 2024

ನ್ಯಾಯಾಲಯ ತೀರ್ಪು ಬರುವ ಮುಂಚೆನೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ-ಬಿಎಸ್ ವೈ



ಸುದ್ದಿಲೈವ್/ಶಿವಮೊಗ್ಗ


ನ್ಯಾಯಾಲಯ ಪ್ರಾಸಿಕ್ಯೂಷನ್ ಗೆ ಕೊಡುವ ಮುಂಚೆ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ. 


ಶಿವಮೊಗ್ಗದಲ್ಲಿ ಸ್ವಗೃಹದಲ್ಲಿ ಮಾಧ್ಯಮಗಳಿಂದ ಮಾತನಾಡಿದ ಬಿಎಸ್ ವೈ ನಾಳೆ ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತೆ ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ.‌ ಯಾಕೆಂದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ ಎಂದರು.


ಯಾವುದೇ ಕಾರಣಕ್ಕೆ ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ‌ಕೊಡೋದು ಒಳ್ಳೆಯದು ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ. ಯಾವುದೇ ಕಾರಣಕ್ಕು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. 


ಮೂಡ ಹಗರಣ ಜಗಜ್ಜಾಹಿರು ಆಗಿರುವ ಸಂಗತಿಯಾಗಿದೆ. ಬಿಜೆಪಿ ಸರಕಾರದ ಅವಧಿಯ ಕೋವಿಡ್ ವರದಿ ವಿಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರಕಾರ ಸ್ವತಂತ್ರ ಇದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಲಿ ಎಂದರು‌.


ನಾವು ಯಾವುದೇ ಹೋರಾಟ  ಮಾಡಲ್ಲ. ರಾಜ್ಯಪಾಲರು ಇನ್ನುಳಿದ ನಾಲ್ವರು ಸಚಿವರಿಗೆ ನೋಟೀಸ್ ಕೊಟ್ಟಿರುವ ವಿಚಾರದ ಬಗ್ಗೆ ಅವರು ಸರ್ವ ಸ್ವತಂತ್ರ ಇದ್ದಾರೆ. ಎಲ್ಲರಿಗೂ ನೋಟೀಸ್ ಕೊಟ್ಟಿದ್ದಾರೆ. ಏನು ಬೇಕಾದರೂ  ತೀರ್ಮಾನ ತೆಗೆದುಕೊಳ್ಳಲಿ. ರಾಜ್ಯಪಾಲರು ನೋಟೀಸ್ ಕೊಟ್ಟಿದ್ದಾರೆ ಏನು ಮಾಡ್ತಾರೆ ನೋಡೋಣ ಎಂದರು. 


ಸಿದ್ದರಾಮಯ್ಯ ಅವರ ತನಿಖೆ ಬಹುತೇಕ ಮುಗಿಯುವ ಹಂತ ತಲುಪಿದೆ. ಅವರು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ತಿಳಿಸಿದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ