Girl in a jacket

ಅಪರಾಧ ವಿಮರ್ಶನ ಸಭೆಯಲ್ಲಿ ಎಸ್ಪಿಯವರ ಖಡಕ್ ಸೂಚನೆಗಳೇನು ಗೊತ್ತಾ?


ಸುದ್ದಿಲೈವ್/ಶಿವಮೊಗ್ಗ

ಇಂದು ಡಿಎಆರ್ ಸಭಾಂಗಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ಅವರ ನೇತೃತ್ವದಲ್ಲಿ   ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳ ಅಪರಾಧ ವಿಮರ್ಶನಾ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಈ ಕೆಳಕಂಡ ಸೂಚನೆಗಳನ್ನು ಕೈಗೊಳ್ಳಲಾಯಿತು. 

1) ತನಿಖೆಯಲ್ಲಿರುವ ಪ್ರಕರಣಗಳ ವಿಮರ್ಶೆ ನಡೆಸಿ ಕಾಲ ಮಿತಿಯೊಳಗೆ ಸದರಿ ಪ್ರಕರಣಗಳ ತನಿಖೆ ಪೂರೈಸಿ ಘನ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸುವಂತೆ, ಸಂಬಂಧಪಟ್ಟ ತನಿಖಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. 

2) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಮಾದಕ ದ್ರವ್ಯ ಗಾಂಜಾ ಮಾರಾಟ, ಸಾಗಾಣಿಕೆ, ಸಂಗ್ರಹಣೆ, ಬೆಳೆಯುವ ಮತ್ತು  ಸೇವನೆಯ ಬಗ್ಗೆ ತಳ ಮಟ್ಟದ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿ NDPS ಕಾಯ್ದೆಯಡಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಯಿತು. 

3)  ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ  ಹಗಲು ಗಸ್ತು ಮತ್ತು ರಾತ್ರಿ ಗಸ್ತನ್ನು ಜಾರಿ ಮಾಡತಕ್ಕದ್ದು ಹಾಗೂ ಸಿಬ್ಬಂಧಿಗಳನ್ನು  ಗಸ್ತಿಗೆ ನೇಮಕ ಮಾಡುವ ಸಂದರ್ಭದಲ್ಲಿ ಆಯಾ ಬೀಟ್ ವ್ಯಾಪ್ತಿಯಲ್ಲಿನ ಎಂಓಬಿ, ರೌಡಿ ಹಾಗೂ ಪೂರ್ವ ಸಜಾ ಆಸಾಮಿಗಳ ಚಟುವಟಿಕೆಗಳ ಬಗ್ಗೆ ಪರಿಶೀಲಿಸುವಂತೆ ಸೂಕ್ತ ನಿರ್ದೇಶನಗಳನ್ನು ನೀಡುವುದು ಮತ್ತು ಗಸ್ತು ಮಾಡುವಾಗ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಸ್ಮಾರ್ಟ್ ಇ-ಬೀಟ್, ಎಂಸಿಸಿಟಿಎನ್.ಎಸ್ ತಂತ್ರಾಂಶಗಳನ್ನು ಕಡ್ಡಾಯವಾಗಿ ಬಳಕೆ ಮಾಡುವುದು. 

4) ಮಾದಕ ವಸ್ತು ಗಾಂಜಾ ಸೇವನೆಯ ಬಗ್ಗೆ ಅನುಮಾನ ಬಂದವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಮಾದಕ ದ್ರವ್ಯ ಸೇವನೆ ದೃಡ ಪಟ್ಟವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದು. 

5) ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಠಾಣಾ ವ್ಯಾಪ್ತಿಯಲ್ಲಿ ತಳ ಮಟ್ಟದ ಮಾಹಿತಿಯನ್ನು ಕಲೆ ಹಾಕಿ ದಾಳಿ ನಡೆಸಿ, ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳುವುದು. 6) ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ತಮ್ಮ ಅದೀನ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡ ವಾಹನಗಳು ಮತ್ತು  ವಾರಸುದಾರರಿಲ್ಲದ  ಮಾಲಿನ ವಿಲೇವಾರಿ ಬಗ್ಗೆ ಸೂಕ್ತ ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

7) ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ  ಸಂಚಾರ ಸೂಚನಾ ಫಲಕಗಳು, ರಂಬಲ್ ಸ್ಟ್ರಿಪ್ಸ್, ಕ್ಯಾಟ್ ಐಸ್, ರೋಡ್ ಹಂಪ್ಸ್ ಗಳನ್ನು ಅಳವಡಿಸುವ ಮೂಲಕ  ಅಪಘಾತ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ 2024ನೇ ಸಾಲಿನ  ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಶಿವಮೊಗ್ಗ ಜಿಲ್ಲೆಯ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೋಲಿಸ್ ನಿರೀಕ್ಷಕರು  ಮತ್ತು ಪೊಲೀಸ್ ಉಪನಿರೀಕ್ಷಕರು ಸೇರಿ ಒಟ್ಟು 40 ಅಧಿಕಾರಿಗಳಿಗೆ ಪ್ರಶಂಸನ ಪತ್ರವನ್ನು ನೀಡಿ  ಅಭಿನಂದಿಸಿದರು. 



ಈ ಸಭೆಯಲ್ಲಿ  ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1,  ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಕೃಷ್ಣಮೂರ್ತಿ ಟಿ. ಪಿ. ಪೊಲೀಸ್ ಉಪಾದೀಕ್ಷಕರು, ಡಿಎಆರ್ ಶಿವಮೊಗ್ಗ, ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ, ಗೋಪಾಲಕೃಷ್ಣ  ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ,  ಕೇಶವ್ ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ, ಕೃಷ್ಣಮೂರ್ತಿ ಪೊಲೀಸ್ ಉಪಾದೀಕ್ಷಕರು, ಸಿ.ಇ.ಎನ್ ಪೊಲೀಸ್ ಠಾಣೆ ಶಿವಮೊಗ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು