ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನವವಿವಾಹಿತ ಮಹಿಳೆ
ಸುದ್ದಿಲೈವ್/ತೀರ್ಥಹಳ್ಳಿ
ಪ್ರೀತಿಸಿ ಮದುವೆಯಾದ ನವ ವಿವಾಹಿತೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ಶಮಿತ(26) ಎಂಬುವರು ಮನೆಯ ಉಪ್ಪರಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಮಿತ ರವರು ವಿದ್ಯಾರ್ಥ್ ರವರ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ವಿದ್ಯಾರ್ಥ್ ಸದ್ಯ ಸೋಮೇಶ್ವರ ಅರಣ್ಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥ್ ರವರು ಕೆಲ ದಿನಗಳಿಂದ ನೈಟ್ ಡ್ಯೂಟಿಯಲ್ಲಿದ್ದಾರೆ. ಅದೇ ರೀತಿ ಕಳೆದ ರಾತ್ರಿಯು ಸಹ ಡ್ಯೂಟಿಗೆ ಹೋಗಿದ್ದಾರೆ. ಬೆಳಗ್ಗೆಯಾದರು ಸಹ ಶಮಿತ ರವರು ಕೆಳಗೆ ಇಳಿಯದೆ ಇರುವುದನ್ನು ಗಮನಿಸಿ, ಮನೆಯವರು ಕೆಲಸದವರು ಹೋಗಿ ನೋಡಿದಾಗ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಮಿತಿ ರವರು ನೊಣಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯವರಾಗಿದ್ದು, ಕಳೆದ ವರ್ಷ ಮಾರ್ಚ್ ನಲ್ಲಿ ವಿದ್ಯಾರ್ಥ್ ಜೊತೆ ಮದುವೆಯಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ವಿಭಾಗದ ಅಮಾವಾಸ್ಯೆಬೈಲು ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ-https://suddilive.in/archives/7102