ರಸ್ತೆ ಅಪಘಾತ-ವೃದ್ಧೆ ಸಾವು, ಸಾಗರದಲ್ಲಿ ವ್ಯಕ್ತಿ ಆತ್ಮತ್ಯೆ
ಸುದ್ದಿಲೈವ್/ಭದ್ರಾವತಿ/ಸಾಗರ ಮಾ 16
ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ಮಹಿಳೆಯನ್ನು ಹೊಸಮನೆ ನಿವಾಸಿ ವಿಜಯಲಕ್ಷ್ಮೀ (70) ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಕೋರ್ಟ್ ಮುಂಭಾಗದ ಕನಕಮಂಟಪ ಹಿಂಭಾಗದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆತ್ಮಹತ್ಯೆ
ಶಿವಮೊಗ್ಗ ಜಿಲ್ಲತಾಲೂಕಿನ ತಾಳಗುಪ್ಪ ಹೋಬಳಿ ಆಲಳ್ಳಿ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಹೆಸರು ಉಪೇಂದ್ರ (45), ಕುಮಟಾ ಮೂಲದ ಈತನ ಶವ ಆಲಳ್ಳಿ ಸಮೀಪ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಇವರ ಕುಟುಂಬ ಸಿದ್ದಾಪುರದಲ್ಲಿ ನೆಲೆಸಿದೆ ಎನ್ನಲಾಗಿದೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬದವರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ-https://suddilive.in/archives/10797