ಸ್ಥಳೀಯ ಸುದ್ದಿಗಳು

ಕಾಡುಕೋಣ- ಹಾಗೂ ಕಾಡೆಮ್ಮೆ ಮೃತ: ಆರೋಪಿ ಪರಾರಿ

ಸುದ್ದಿಲೈವ್/ಸೊರಬ

ಸೊರಬ ತಾಲೂಕು ಚಂದ್ರಗುತ್ತಿ ಸಮೀಪ, ಕುಂದಗೋಳ- ನ್ಯಾರ್ಶಿ ಗ್ರಾಮದಲ್ಲಿ ಕಾಡುಕೋಣ ಹಾಗೂ ಕಾಡೆಮ್ಮೆಯನ್ನ ಬಲಿ ಪಡೆಯಲಾಗಿದೆ. ಕಾಡು ಪ್ರಾಣಿ ಬೇಟೆಗೆ ಬಿಟ್ಟ ವಿದ್ಯುತ್ ತಂತಿಗೆ ಎರಡು ಅಮೂಲ್ಯ ಜೀವಗಳು ಮೃತಪಟ್ಟಿವೆ.

ದುರಂತ ಅಂದ್ರೆ ಮೃತ ಕೋಣಗಳು ಹೊಲದಂಚಿನಲ್ಲೇ ಕೊಳೆಯುವ ಸ್ಥಿತಿಯಲ್ಲಿದ್ದರೂ ಒಂದು ವಾರ ಯಾರೂ ಮಾಹಿತಿ ನೀಡಿಲ್ಲ.‌ ಬುಧವಾರ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಯನ್ನ ಗುರುತಿಸಿದ್ದಾರೆ. ಸದ್ಯ ಘಟನೆಗೆ ಕಾರಣನಾದ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಮಣ್ಣತ್ತಿ, ಕುಂದುಗೋಡು ಭಾಗದಲ್ಲಿ ಕಾಡು ಪ್ರಾಣಿಗಳು ವಿದ್ಯುತ್ ಶಾಕ್ ಗೆ ಬಲಿಯಾಗುತ್ತಿವೆ. ಜಿಂಕೆ, ಬರ್ಕ, ಮುಳ್ಳು ಹಂದಿ, ಚಿಪ್ಪು ಹಂದಿಯನ್ನ ಭೇಟೆಯಾಡುತ್ತಾರೆ. ಒತ್ತುವರಿ ಕಾರಣದಿಂದಲೂ ಅರಣ್ಯ ನಾಶವಾಗಿದೆ.

ಇದನ್ನೂ ಓದಿ-https://suddilive.in/archives/10270

Related Articles

Leave a Reply

Your email address will not be published. Required fields are marked *

Back to top button