ನಾಳೆ ಬಿಜೆಪಿಯ ಎರಡನೇ ಪಟ್ಟಿ ಫೈನಲ್? ಬಿಎಸ್ ವೈ
ಸುದ್ದಿಲೈವ್/ಶಿವಮೊಗ್ಗ
ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ ಕುರಿತು ವಿಳಂಭವಾಗುತ್ತಿರುವ ನಡುವೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋಗಿ ಬಂದಿದ್ದಾರೆ. ಎರಡು ಮೂರು ದಿನಗಳಲ್ಲಿ ಪಟ್ಟಿಬಿಡುಗಡೆಯಾಗುವ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಾಳೆಯವರೆಗೆ ಎದೆಯಲ್ಲಿ ಡವಡವ ಎನ್ನಲಿದೆ.
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು ನಾಳೆ ಮತ್ತೆ ದೆಹಲಿಗೆ ಹೋಗ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದೆ. ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸುತ್ತಾರೆ ಎಂದಿದ್ದಾರೆ.
ಈಗಾಗಲೇ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಬಹುತೇಕ ಪಟ್ಟಿ ಅಂತಿಮವಾಗಲಿದೆ. ಜೆಡಿಎಸ್ ಪಕ್ಷಕ್ಕೆ ಟಿಕೇಟ್ ಹಂಚಿಕೆ ಕುರಿತು ಯಾವುದೇ ಸ್ಪಷ್ಟನಿರ್ಧಾರವಾಗಿಲ್ಲ.
ಯಾರು ಯಾರಿಗೆ ಯಾವ್ದು ಕೊಡ್ತಾರೆ ಗೊತ್ತಿಲ್ಲ ಎಂದಿದ್ದಾರೆ.
ಇನ್ನು ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ.
ನಾಳೆ ಬಹುತೇಕ ಅಂತಿಮ ಆಗಲಿದೆ. ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಸಂತೋಷ, ಅಭ್ಯರ್ಥಿ ಯಾರಾದರೂ ನಿಲ್ಲಲ್ಲೇಬೇಕಲ್ಲ ಎಂದರು.
ಬಹುತೇಕ ಹಾಲಿ ಸಂಸದರಿಗೆ ಟಿಕೇಟ್ ಇಲ್ಲದ ವಿಚಾರ, ಆ ರೀತಿ ಯಾವುದೇ ಚರ್ಚೆ ಇಲ್ಲ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದಿದ್ದಾರೆ.