ಗೆದ್ದ ಮೇಲೆ ಬಿಜೆಪಿ ಸೇರ್ತೀನಿ-ಈಶ್ವರಪ್ಪ
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ ಎಂದು ಈಶ್ವರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕು ತೊಂದರೆ ಆಗಲ್ಲ ನೂರಕ್ಕೆ ನೂರು ಗೆಲ್ಲುತ್ತಾರೆ ಅಂತಾ ಸ್ವಾಮೀಜಿಗಳು ಹೇಳಿದ್ದಾರೆ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ. ಸರ್ವಾಧಿಕಾರಿ ಧೋರಣೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಅಂತಾ ರಾಜ್ಯದಲ್ಲಿ ಪ್ರಯತ್ನ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ. ಯಾರೇ ಬಂದು ಮನವೊಲಿಸಿದರು ಹಿಂದೆ ಸರಿಯಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಾನು ಸ್ಪರ್ಧೆ ಮಾಡಿದ್ದರೆ ನೂರಕ್ಕೆ ನೂರು ಗೆಲ್ಲುತ್ತಿದೆ ಎಂದರು.
ಬಿಜೆಪಿ 27 ಕ್ಷೇತ್ರದಲ್ಲಿ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಕುಟುಂಬದ ವಿರುದ್ದ ಸ್ಪರ್ಧೆ ಮಾಡಿದ್ದೇನೆ. ಶಿವಮೊಗ್ಗದಲ್ಲಿ ನಾನು ಗೆಲ್ಲುತ್ತೇನೆಗೆದ್ದ ನಂತರ ಬಿಜೆಪಿಗೆ ಸೇರುತ್ತೇನೆ ಎಂದರು.
ಇದನ್ನ ಓದಿ-https://suddilive.in/archives/11092