ಕಾಂಗ್ರೆಸ್ ಅಭ್ಯರ್ಥಿ ಗೀತಾ, ನಟ ಶಿವರಾಜ್ ಕುಮಾರ್ ಶಿವಮೊಗ್ಗಕ್ಕೆ ಎಂಟ್ರಿ
ಸುದ್ದಿಲೈವ್/ಶಿವಮೊಗ್ಗ
ಗೀತಾ ಶಿವರಾಜ್ಕುಮಾರ್ ಶಿವಮೊಗ್ಗಕ್ಕೆ ಎಂಟ್ರಿಯಾಗಿದ್ದು ಭದ್ರಾವತಿಯ ಬಾರಂದೂರಿನಿಂದ ಭವ್ಯ ಸ್ವಾಗತವನ್ನ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಜೈಕಾರ ಹಾಕಿ ತೆರೆದ ವಾಹನದಲ್ಲಿ ಕರೆತರಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಭದ್ರಾವತಿಯಲ್ಲಿ ಅವರಿಗೆ ಭವ್ಯ ಸ್ವಾಗತವನ್ನು ಕೋರಲಾಯಿತು. ಶಾಸಕ ಬಿ.ಕೆ. ಸಂಗಮೇಶ್ವರ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಈ ವೇಳೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಹ ಜೊತೆಗೆ ಇದ್ದರು. ಕಾರ್ಯಕರ್ತರು ಕಾಂಗ್ರೆಸ್ ಮತ್ತು ಗೀತಾ ಶಿವರಾಜ್ಕುಮಾರ್ ಪರ ಜಯಘೋಷ ಹಾಕಿದರು.
ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬಳಿಕ ಇದೇ ಪ್ರಥಮ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಗೀತಾ ಶಿವರಾಜ್ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಓಪೆನ್ ಜೀಪ್ನಲ್ಲಿ ಮೆರವಣಿಗೆಯನ್ನು ಮಾಡಲಾಯಿತು. ಗ್ಯಾರಂಟಿ ಪರ ಘೋಷಣೆಗಳು ಈ ಸಂದರ್ಭದಲ್ಲಿ ಮೊಳಗಿದವು. ಬೈಕ್ನಲ್ಲಿ ನೂರಾರು ಕಾರ್ಯಕರ್ತರು ನಡೆಸಿದ್ದಾರೆ.
ಇದನ್ನೂ ಓದಿ-https://suddilive.in/archives/11110