ಸ್ಥಳೀಯ ಸುದ್ದಿಗಳು

ನಾಳೆ ಮತ್ತು ಮಾ.23 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ತುರ್ತು ಕಾಮಗಾರಿ, ಕಂಬಗಳ ಬದಲಾವಣೆ ಹಾಗೂ ತ್ರೈಮಾಸಿಕ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಮತ್ತು ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 21 ರಂದು ಬೆಳಗ್ಗೆ 10- ರಿಂದ ಸಂಜೆ 04-00ರವರೆಗೆ ಆಲ್ಕೊಳ ಸುತ್ತಮುತ್ತ, ಎಸ್.ಹೆಚ್.ಲೇಔಟ್, ಎಸ್.ಎಲ್.ವಿ.ಲೇಔಟ್, ಕಾಶಿಪುರ ಮುಖ್ಯರಸ್ತೆ, ಕುವೆಂಪು ಬಡಾವಣೆ, ಹೈವೆ ಹೋಟೆಲ್ ಸುತ್ತಮುತ್ತ, ಶ್ರೀನಿವಾಸ್ ವೈನ್ ಸ್ಟೋರ್ ಸುತ್ತಮುತ್ತ, ಲಕ್ಷ್ಮೀಪುರ ಬಡಾವಣೆ, ಪಶುವೈದ್ಯಕೀಯ ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮಾ.21 ರಂದು ಹಮ್ಮಿಕೊಂಡಿದ್ದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂಕೆಕೆ ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಾ.23 ರಂದು ವಿದ್ಯುತ್ ವ್ಯತ್ಯಯ

ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 23 ರಂದು ಬೆಳಗ್ಗೆ 09.00 ರಿಂದ ಸಂಜೆ 06-00ರವರೆಗೆ ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/11146

Related Articles

Leave a Reply

Your email address will not be published. Required fields are marked *

Back to top button