ನಗರ‌ ಸುದ್ದಿಗಳು

ಮಾ.22 ರಂದು ವಿದ್ಯುತ್ ವ್ಯತ್ಯಯ, ಮಾ23 ನೀರು ಸಹ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಮಾ.23 ರಂದು ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ ಕರೆಂಟ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದ ಬೆನ್ನಲ್ಲೇ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನೀರು ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ತಾತ್ಕಾಲಿಕ ಕಾಮಗಾರಿ ದುರಸ್ಥಿ ಕಾರ್ಯದ ಹಿನ್ನೆಯಲ್ಲಿ ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿತ್ತು.

ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಮಾ.23 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಾಳೆ ಗಾಂಧಿ ಬಜಾರ್ ಸುತ್ತಮುತ್ತ ಕರೆಂಟ್ ಕಟ್

ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಮಾ.22 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/11230

Related Articles

Leave a Reply

Your email address will not be published. Required fields are marked *

Back to top button