ಗುರುದತ್ತ ಹೆಗಡೆ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿ
ಸುದ್ದಿಲೈವ್/ಶಿವಮಗ್ಗ
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ನೂತನ ಡಿಸಿಯಾಗಿ ಗುರುದತ್ತ ಹೆಗಡೆ ನಿಯೋಜನೆಗೊಂಡಿದ್ದಾರೆ.
ಡಾ.ಸೆಲ್ವಮಣಿ ಬೆಂಗಳೂರಿನ ಇ-ಗವರ್ನೆನ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಬೆಂಗಳೂರಿಗೆ ವರ್ಗಾವಣೆ ಆಗಿದ್ದಾರೆ. ಪೋಸ್ಟ್ ಗಾಗಿ ಕಾಯುತ್ತಿದ್ದ ಗುರುದತ್ತ ಹೆಗಡೆ ಶಿವಮೊಗ್ಗ ಡಿಸಿಯಾಗಿ ಬರಲಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ವರ್ಗಾವಣೆಗೊಂಡು ಪೋಸ್ಟ್ ಗಾಗಿ ಕಾಯುತ್ತಿದ್ದರು. ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.
ಪಿಯುಸಿವರೆಗೆ ಧಾರವಾಡ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2014ರಲ್ಲಿ ಲೋಕಸೇವ ಆಯೋಗದ ಪರೀಕ್ಷೆಯಲ್ಲಿ ಪಾಸಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ.
ಇದನ್ನೂ ಓದಿ-https://suddilive.in/archives/7883