ರಾಜಕೀಯ ಸುದ್ದಿಗಳು

ಮಠಾಧೀಶರ ಆಶೀರ್ವಾದ ಪಡೆದ ಸಂಸದರು

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸತತ ನಾಲ್ಕನೇ ಬಾರಿಗೆ ಒಮ್ಮತದ ಆಯ್ಕೆಯಾದ ಬೆನ್ನಲ್ಲೇ ಸಂಸದ ರಾಘವೇಂದ್ರ ವಿವಿಧ ಮಠಾಧೀಶರರನ್ನ ಭೇಟಿಯಾಗಿ ಆಶೀರ್ವಾದ ಡೆದಿದ್ದಾರೆ.

ಇಂದು ಚಿತ್ರದುರ್ಗ ಭೋವಿ ಗುರುಪೀಠದಲ್ಲಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾಸ್ವಾಮಿಗಳು, ರಾಜನಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು,

ಶ್ರೀ ನಾರಾಯಣ ಗುರು ಪೀಠದ ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮಿಗಳು, ಶಿಕಾರಿಪುರ ವಿರಕ್ತಮಠದ ಪೂಜ್ಯಶ್ರೀ ಚನ್ನಬಸವ ಮಹಾಸ್ವಾಮಿಗಳು, ಶಿವಶಕ್ತಿ ಪೀಠದ ಪೂಜ್ಯ ಶ್ರೀ ಬಸವ ಪ್ರಸಾದ ಸ್ವಾಮಿಗಳು, ಕಾಶಿ ಅನ್ನಪೂರ್ಣೇಶ್ವರಿ ಮಠದ ಪೂಜ್ಯಶ್ರೀ ಮಹಾಲಿಂಗ ಸ್ವಾಮಿ ಅವರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ಶಿವಪ್ಪ ಅವರು, ಶ್ರೀ ವೀರಭದ್ರಪ್ಪ ಪೂಜಾರಿ ಅವರು, ಶ್ರೀ ಸಂತೋಷ್ ಬಳ್ಳೆಕೆರೆ ಅವರು, ಶ್ರೀ ಹೊಳಲೂರು ಸಂತೋಷ್ ಅವರು, ಶ್ರೀ ಗಣೇಶ್ ಅವರು, ಶ್ರೀ ಮೂರ್ತಿ ಅವರು, ಶ್ರೀ ಶಿವಲಿಂಗಪ್ಪ ಅವರು ಸೇರಿದಂತೆ ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/11376

Related Articles

Leave a Reply

Your email address will not be published. Required fields are marked *

Back to top button