ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಲಿ-ಈಶ್ವರಪ್ಪ
ಸುದ್ದಿಲೈವ್/ಶಿವಮೊಗ್ಗ
ಸಚಿವ ಶಿವರಾಜ್ ತಂಗಡಿಗಿ ಒಬ್ಬ ಅಯೋಗ್ಯ ಎಂದು ಮಾಜಿ ಡಿಸಿಎಂ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರ ಮತ್ತು ಗ್ರಾಮಾಂತರ ವಿಧಾನಸಭೆಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯ ನಂತರ ಮಾಧ್ಯಮಗಳಿಗೆ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭೆ ಕ್ಷೇತ್ರಕ್ಕೂ ಭೇಟಿ ನೀಡಿದ್ದೇನೆ. ಈಶ್ವರಪ್ಪ ಅವರಿಗೆ ಅನ್ಯಾಯ ಆಗಿದೆ. ಯಡಿಯೂರಪ್ಪ ಅನ್ಯಾಯ ಮಾಡಿದ್ದಾರೆ. ಅನ್ಯಾಯಕ್ಕೆ ಉತ್ತರ ಕೊಡ್ತೀವಿ ಎಂದು ಕಾರ್ಯಕರ್ತರು ಅಂತಿದ್ದಾರೆ ಎಂದು ಹೇಳಿದರು.
ಹಿಂದುತ್ವದ ಪರ ಧ್ವನಿ ಎತ್ತುವವರನ್ನು ತುಳಿಯುತ್ತಿದ್ದಾರೆ. ನಾನು ಚುನಾವಣೆಗೆ ಸ್ಪರ್ಧೆ ಮಾಡ್ತೀನಿ ಅಂದ ಮೇಲೆ ಪೋನ್ ಬರುತ್ತಿದೆ. ಹೊಂದಾಣಿಕೆ ರಾಜಕಾರಣ ಮಾಡಿದ್ದಾರೆ. ನಾನು ಈ ಬಾರಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಸ್ಪರ್ಧೆ ಮಾಡಬೇಡಿ ಅಂತಾ ದೆಹಲಿಯಿಂದ ಪೋನ್ ಬರುತ್ತಿದೆ. 12 ತಾರೀಖು ನಾಮಪತ್ರ ಸಲ್ಲಿಸುತ್ತೇನೆ. ಸಚಿವ ಶಿವರಾಜ್ ತಂಗಡಗಿ ಒಬ್ಬ ಅಯೋಗ್ಯ ಎಂದು ವಾಗ್ದಾಳಿ ನಡೆಸಿದರು. ಮೋದಿ ಮೋದಿ ಎನ್ನುವವರಿಗೆ ಕಪಾಲಕ್ಕೆ ಹೊಡೆಯಬೇಕು ಎಂದು ಹೇಳಿರುವುದಕ್ಕೆ ಈಶ್ವರಪ್ಪ ಈ ರೀತಿಯ ಪ್ರತಿಕ್ರಿಯೆ ನೀಡಿದರು.
ಮೋದಿ ವಿಶ್ವ ನಾಯಕ, ಈಡಿ ದೇಶದ ಜನ ಮೋದಿ ಮೋದಿ ಅಂತಿದ್ದಾರೆ. ಶಿವರಾಜ್ ತಂಗಡಗಿ ರಾಜೀನಾಮೆ ಕೊಡಲಿ.ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಡಗಿಯನ್ನು ಕಿತ್ತು ಬಿಸಾಕಲಿ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ-https://suddilive.in/archives/11518