ಕ್ರೈಂ ನ್ಯೂಸ್
ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ ಐ ಎ ದಾಳಿ
ಸುದ್ದಿಲೈವ್/ತೀರ್ಥಹಳ್ಳಿ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ ಐ ಎ ದಾಳಿ ನಡೆಸಿದೆ.
ತೀರ್ಥಹಳ್ಳಿ ಸೇರಿದಂತೆ ದೇಶದ ಐದು ಕಡೆ ಎನ್ಐಎ ದಾಳಿ ನಡೆಸಿದೆ. ನಿನ್ನೆನೇ ಬಂದಿರುವ ಎನ್ಐಎ ಪಟ್ಟಣದಲ್ಲಿ 3ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ತಿಳಿದುಬಂದಿದೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ಐಎ ಟೀಮ್ ದಾಳಿ ಮಾಡಿದ್ದಾರೆ.
ಕೆಲ ಶಂಕಿತರ ಮನೆಯ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎನ್ಐಎ ಟೀಂ.
ಬ್ಲಾಸ್ಟ್ ಕೇಸ್ ವಿಚಾರಕ್ಕೆ ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ-https://suddilive.in/archives/11550