ರಾಜಕೀಯ ಸುದ್ದಿಗಳು

ರಾಘಣ್ಣನಿಗೆ ಕಾರ್ಯಕರ್ತರು ಈಗ ನೆನಪಾಗುತ್ತಿದೆ-ಈಶ್ವರಪ್ಪ

ಸುದ್ದಿಲೈವ್/ಶಿವಮೊಗ್ಗ

ಏಪ್ರಿಲ್ 12ನೇ ತಾರೀಖಿಗೆ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ನಾಮಪತ್ರ ಸಲ್ಲಿಸುವುದಾಗಿ ಸಾಗರದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮಣ್ಣ ಶೆಟ್ಟಿ ಪಾರ್ಕಿನಿಂದ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಲಾಗುತ್ತದೆ. ನಮ್ಮ ಪತ್ರ ಸಲ್ಲಿಕೆ ಸಂದರ್ಭದಲ್ಲಿ 25,000 ಕಾರ್ಯಕರ್ತರು ಸೇರಿಸುವುದಾಗಿ ತಿಳಿಸಿದರು.

ಸೋಮವಾರ ಸಾಗರದಲ್ಲಿ ರಾಷ್ಟ್ರಭಕ್ತರ ಬಳಗದ ಹೆಸರಿನಲ್ಲಿ ಚುನಾವಣಾ ಕಾರ್ಯಾಲಯ ಉದ್ಘಾಟಿಸಿದ ಕೆ ಎಸ್ ಈಶ್ವರಪ್ಪ ನಂತರ ಮಾಧ್ಯಮಗಳಿಗೆ ಮಾತನಾಡಿ,  ಈಗ ರಾಘಣ್ಣರವರಿಗೆ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಕಾರ್ಯಕರ್ತರ ಮನೆಗಳಿಗೆ ಹೋಗಿ ಯಾರೂ ಕೂಡ ಈಶ್ವರಪ್ಪನವರಿಗೆ ಬೆಂಬಲ ನೀಡಬೇಡಿ ಎಂದು ಹೇಳುತ್ತಿದ್ದಾರೆ. ಕಾರ್ಯಕರ್ತರು ತಕ್ಕ ಉತ್ತರ ನೀಡುವ ಮೂಲಕ ರಾಘಣ್ಣರಿಗೆ ಕಳುಹಿಸಿ ಕೊಡುತ್ತಿದ್ದಾರೆ ಎಂದು ತಿಳಿಸಿದರು.

ಮಗ ಸೋಲುತ್ತಾನೆ ಎಂದು ಯಡಿಯೂರಪ್ಪರವರು ನನ್ನ ಮನೆಗೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ.ಯಾವ ಮುಖ ಇಟ್ಟುಕೊಂಡು ನನ್ನ ಮನೆಗೆ ಬರುತ್ತಾರೆ.ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ.ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ‌ ಎಂದು ಪುನರ್ ಉಚ್ಚರಿಸಿದ್ದಾರೆ.

ಇದನ್ನೂ ಓದಿ-https://suddilive.in/archives/11886

Related Articles

Leave a Reply

Your email address will not be published. Required fields are marked *

Back to top button