ಸ್ಥಳೀಯ ಸುದ್ದಿಗಳು

ಹಣಗೆರೆಕಟ್ಟೆಯಲ್ಲಿ ಮಹಿಳಾ ಪ್ರವಾಸಿ ಮರ್ಡರ್

ಸುದ್ದಿಲೈವ್/ಶಿವಮೊಗ್ಗ

ಹಣಗರೆಕಟ್ಟೆಯ ಖಾಸಗಿ ವಸತಿ ಗೃಹದ ರೂಂವೊಂದರಲ್ಲಿ  ಮಹಿಳ ಪ್ರವಾಸಿವೊಬ್ಬಳ ಮೃತದೇಹವೊಂದು ಪತ್ತೆಯಾಗಿದೆ. ಪತ್ತೆಯಾದ ಶವವನ್ನ ಅಪರಿಚಿತನಿಂದ ಕೊಲೆಯಾಗಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಪ್ರಸಿದ್ಧ ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದ ಖಾಸಗಿ ತಂಗುದಾಣದ ವಸತಿಗೃಹವೊಂದರಲ್ಲಿ 30 ವರ್ಷದ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಎರಡು ಮೂರು ದಿನಗಳ ಹಿಂದೆ ಹೊರಗಡೆಯಿಂದ ಬಂದ ಮಹಿಳೆ ವಸತಿ ಗೃಹದಲ್ಲಿ ತಂಗಿದ್ದಳು. ಈಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಮಹಿಳೆಯನ್ನ ಕೊಲೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಮಿಥುನ್ ಕುಮಾರ್, ಹಣಗೆರೆಕಟ್ಟೆಯಲ್ಲಿ ಶವ ಪತ್ತೆಯಾಗಿದೆ. ಸುಮಾರು 30 ವರ್ಷದ ಮಹಿಳ ಪ್ರವಾಸಿಯಾಗಿದ್ದಾಳೆ. ಹೆಸರು ಮತ್ತು ಕೊಲೆಯಾಗಿರುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/12045

Related Articles

Leave a Reply

Your email address will not be published. Required fields are marked *

Back to top button