ಕ್ರೈಂ ನ್ಯೂಸ್
ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನನ್ನ ವಶಕ್ಕೆ ಪಡೆದ ಎನ್ಐಎ?
ಸುದ್ದಿಲೈವ್/ತೀರ್ಥಹಳ್ಳಿ
ಎನ್ ಐಎ ದಾಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನ ವಶಕ್ಕೆ ಪಡೆದಿರುವುದು ಕುತೂಹಲ ಮೂಡಿಸಿದೆ.
ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಸಿಡಿಸಿದ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆಸಿ ತೀರ್ಥಹಳ್ಳಿಯಲ್ಲಿ ಸಂಚಲನ ಮೂಡಿಸಿತ್ತು.
ಅದರ ಬೆನ್ನಲ್ಲೆ ಎನ್ಐಎ ಮತ್ತೊಂದು ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಿಜೆಪಿಯ ನಗರ ಘಟಕದ ಮುಖಂಡನನ್ನ ಬಂಧಿಸಿದೆ.
ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನ ಈ ಹಿಂದೆ ಎನ್ಐಎ ಬಂಧಿಸಿತ್ತು. ಈ ಹುಡುಗರ ಜೊತೆ ನಗರ ಘಟಕನ ಜೊತೆ ಸಂಪರ್ಕ ಇದ್ದ ಕಾರಣ ಬಂಧಿಸಿರುವುದು ಕುತೂಹಲ ಮೂಡಿಸಿದೆ.
ಬಿಜೆಪಿ ಮುಖಂಡನನ್ನ ವಿಚಾರಣೆ ನಡೆಸಿ ಬಿಟ್ಟರೂ ಬಿಡಬಹುದು. ಆದರೆ ಎನ್ಐಎ ದಾಳಿ ಮಾತ್ರ ಚುನಾವಣೆ ಸಂದರ್ಭದಲ್ಲಿ ಬಂಧಿಸಿರುವುದು ಚರ್ಚೆಗೂ ಗ್ರಾಸವಾಗಿದೆ ಹಾಗೂ ಕುತೂಹಲ ಮೂಡಿಸಿದೆ.
ಇದನ್ನೂ ಓದಿ-https://suddilive.in/archives/12118