ನಗರ‌ ಸುದ್ದಿಗಳು

ಗೀತಾ ಶಿವರಾಜ್ ಕುಮಾರ್ ಪರ ಬೈಕ್ ರ್ಯಾಲಿ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಭರ್ಜರಿ ಪ್ರಚಾರ ನಡೆಯುತ್ತಿದೆ. ತೀರ್ಥಹಳ್ಳಿ ವಿಧಾನ ಸಭೆಯ ಗಾಜನೂರಿನಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಪರ ಬೈಕ್ ರ್ಯಾಲಿ ನಡೆದಿದೆ.

ಇದೇ ವೇಳೆ, ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳಿ ಗ್ರಾಮದ ಚೌಡಮ್ಮ ದೇವಿಗೆ ಪೂಜೆ ಸಲ್ಲಿಸಿ, ಬೈಕ್ ರ್ಯಾಲಿ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದರು.

ಬೈಕ್ ರ್ಯಾಲಿ ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚಾಲನೆ ನೀಡಿದರು. ರ್ಯಾಲಿಯಲ್ಲಿ ೩೦೦ ಕ್ಕೂ ಹೆಚ್ಚು ಬೈಕ್ ಹಾಗೂ 500 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

ತೀರ್ಥಹಳ್ಳಿ ತಾಲ್ಲೂಕಿನ ಸಿಂಗನ ಬಿದರೆ, ಮಂಡಗದ್ದೆ, ತದೂರು, ಬೆಜವಳ್ಳಿ, ಕನ್ನಂಗಿ, ಹಣಗೆರೆ ಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸಲಾಯಿತು.

ಪ್ರಚಾರ ಸಭೆಗೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ನಡೆಸಿದ್ದಾರೆ. ಬಹುತೇಕ ರ್ಯಾಲಿಯಲ್ಲಿ ಅಭ್ಯರ್ಥಿಗಳು ಹಾಜರಿರುತ್ತಾರೆ.  ಇಂದು ಗ್ರಾಮಾಂತರ ಭಾಗದಲ್ಲಿ ಬೈಕ್ ರ್ಯಾಲಿ ನಡೆಸಲಾಗಿದೆ. ಜಿಲ್ಲೆಯಲ್ಲಿ ಅಭ್ಯರ್ಥಿ ಗೀತ ಪ್ರಚಾರದಲ್ಲಿ ಇದ್ದರೂ ಕೇವಲ ಕಾರ್ಯಕರ್ತರ ರ್ಯಾಲಿ ನಡೆಸಲಾಗಿದೆ. ಚುನಾವಣೆ ವೇಳೆ ಅಭ್ಯರ್ಥಿಗಳು ಹಾಜರಿದ್ದು ರ್ಯಾಲಿ ನಡೆಸುವುದು ಸಾಮಾನ್ಯವಾದುದರಿಂದ ಅವರ ಗೈರು ಹಾಜರಿ ಎದ್ದು ತೋರುತ್ತಿತ್ತು.

ಬೈಕ್ ರ್ಯಾಲಿಯಲ್ಲಿ ನೂರಾರು ಕಾರ್ಯಕರ್ತರು ಭಾಗಿ‌ದ್ದಾರೆ. ಶಿವಮೊಗ್ಗದ ಗಾಜನೂರಿನ ಹೊಸಹಳ್ಳಿ ಹಾಗೂ ಸಿಂಗನಮನೆ ಗ್ರಾ.ಪಂ. ನಲ್ಲಿ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.

ಬೈಕ್ ರ್ಯಾಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಾಗೂ ಕಾಂಗ್ರೆಸ್ ಪರ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್ ಬಾವುಟ ಹಿಡಿದು ಕಾರ್ಯಕರ್ತರು ರ್ಯಾಲಿ ನಡೆಸಿದ್ದಾರೆ. ಕಾನೇಹಳ್ಳದಿಂದ ಗಾಜನೂರು ವರೆಗೆ ರ್ಯಾಲಿ ನಡೆದಿದೆ.

ನಂತರ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಕಿಮ್ಮನೆ ರತ್ನಾಕರ್, ದುಗ್ಗಪ್ಪ ಗೌಡ, ಮುಡುಬ ರಾಘವೇಂದ್ರ, ರಮೇಶ್ ಶೆಟ್ಟಿ ಶಂಕರಘಟ್ಟ, ವಿಜಯ್ ಕುಮಾರ್ ಸಂತೇಕಡೂರು, ಗಣೇಶ ಗಾಜನೂರು, ನವಿನ್, ಸುಷ್ಮಾ ಇದ್ದರು.

ಇದನ್ನೂ ಓದಿ-https://suddilive.in/archives/12154

Related Articles

Leave a Reply

Your email address will not be published. Required fields are marked *

Back to top button