ಕ್ರೈಂ ನ್ಯೂಸ್

ಸವಳಂಗ-ರಸ್ತೆ ಅಪಘಾತ, ಮೂವರು ಸಾವು

ಸುದ್ದಿಲೈವ್/ಸವಳಂಗ

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ದಾರಿಯಲ್ಲಿ ಕೆಎಸ್‌ಆರ್‌ಟಿಸಿ ವಾಯುವ್ಯ ಸಾರಿಗೆ ಬಸ್‌ ಹಾಗೂ ಒಮಿನಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಒಮಿನಿಗೆ ಡಿಕ್ಕಿಯಾದ ಬಸ್‌ ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿಕೊಂಡು ನಿಂತಿದೆ. ಘಟನೆಯಲ್ಲಿ ಒಮಿನಿಯಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಚಿನ್ನಿಕಟ್ಟೆ ಬಿದರಹಳ್ಳಿ ನಡುವಿನ ಮಾರ್ಗದ ನಡುವೆ ಈ ಘಟನೆ ನಡೆದಿದ್ದು ಒಮಿನಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆಯಿತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಘಟನೆಯಲ್ಲಿ ಬಸ್‌ನಲ್ಲಿದ್ದವರಿಗೂ ಗಾಯವಾಗಿದ್ದು ಅವರನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಇನ್ನು ಒಮಿನಿಯಲ್ಲಿ ಪ್ರಯಾಣಿಸುತ್ತಿದ್ದವರು ಹರಮಘಟ್ಟದವರು ಎಂದು ತಿಳಿದುಬಂದಿದ್ದು, ಅವರೆಲ್ಲರೂ ಶಿಕಾರಿಪುರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಮೃತರನ್ನ ನಜುಂಡಪ್ಪ, ರಾಕೇಶ್, ದೇವರಾಜ್ ಎಂದು ಗುರುತಿಸಲಾಗಿದೆ. ಒಮಿನಿಯಲ್ಲಿದ್ದ ಇನ್ನೊಬ್ಬರಿಗೂ ಗಂಭೀರವಾದ ಗಾಯವಾಗಿದ್ದು ಅವರನ್ನ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಬಸ್‌ ರಸ್ತೆಪಕ್ಕದ ತಡೆಗೋಡೆಗೆ ಗುದ್ದಿದ್ದು, ಬಸ್‌ನ ಮುಂದಿನ ಚಕ್ರ ಕಳಚಿದ್ದು, ಮುಂಭಾಗ ಜಖಂಗೊಂಡಿದೆ. ಘಟನೆಯಲ್ಲಿ ಒಮಿನಿ ವಾಹನ ಸಂಪೂರ್ಣ ಛಿದ್ರಗೊಂಡಿದ್ದು ಮೃತದೇಹಗಳು ಛಿದ್ರಗೊಂಡಿವೆ. ಸ್ಥಳದಲ್ಲಿ ಜನರ ಜಮಾಯಿಸಿದ್ದು ಪೊಲೀಸರು, ತುರ್ತು ವಾಹನ ಸಿಬ್ಬಂದಿ ಸ್ಥಳದಲ್ಲಿದ್ದಾರೆ.

ಇದನ್ನೂ ಓದಿ-https://suddilive.in/archives/12540

Related Articles

Leave a Reply

Your email address will not be published. Required fields are marked *

Back to top button