ಕುಸಿದು ಬಿದ್ದ ಮೆರವಣಿಗೆಯಲ್ಲಿದ್ದ ಎಲ್ ಇ ಡಿ ಬೋರ್ಡ್-ಗಾಯಾಳುಗಳನ್ನ ಕ್ಯಾರೆ ಎನ್ನದ ಕಾಂಗ್ರೆಸ್ ಮುಖಂಡರು
ಸುದ್ದಿಲೈವ್/ಶಿವಮೊಗ್ಗ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ಮೆರವಣಿಗೆ ಸಂದರ್ಭದಲ್ಲಿ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಗಾಂಧಿ ಬಜಾರ್ ನ ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಹೊರಟ ಮೆರವಣಿಗೆಯಲ್ಲಿ ಏಕಾಏಕಿ ದೊಡ್ಡ ಗಾತ್ರದ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದುಬಿದ್ದು ಪತ್ರಕರ್ತರಿಗೂ ಸೇರಿ ನಾಲ್ವರಿಗೆ ಗಾಯಗಳಾಗಿವೆ.
ಒಬ್ಬ ಮಹಿಳೆ ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಮೆರವಣಿಗೆಗೆ ಆಗಮಿಸಿದ ವ್ಯಕ್ತಿ ಒಬ್ಬರ ತಲೆಯ ಮೇಲೆ ಬಿದ್ದ ಪರಿಣಾಮ ತೀವ್ರವಾಗಿ ಪೆಟ್ಟುಬಿದ್ದಿದೆ. ಗಾಯಾಳುಗಳನ್ನು ಕಂಡು ಕಾಣದಂತೆ ಮೆರವಣಿಯಲ್ಲಿದ್ದ ಕಾಂಗ್ರೆಸ್ ಮುಖಂಡರು ಮುಙದೆ ಸಾಗಿದ್ದಾರೆ.
ನ್ಯೂಸ್ 18 ವರದಿಗಾರ ವಿನಯ್ ಪುರದಾಳ್ ಸೇರಿದಂತೆ ಒಟ್ಟು ನಾಲ್ವರಿಗೆ ಗಾಯಗಳಾಗಿವೆ. ಕಣ್ಣೆದುರೆ ಅನಾಹುತ ಸಂಭವಿಸಿದರು ಕಾಂಗ್ರೆಸ್ ಮುಖಂಡರು ಕ್ಯಾರೆ ಎನ್ನದಿರುವುದು ಅಚ್ಚರಿ ತರಿಸಿದೆ. ಆದರೆ ಸ್ಥಳೀಯರು ಗಾಯಾಳುಗಳಿಗೆ ಆರೈಕೆ ಮಾಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
ಎಲ್ ಇಡಿಯನ್ನು ಅಳವಡಿಸಿದ್ದ ವ್ಯಕ್ತಿಯ ನಿರ್ಲಕ್ಷಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ-https://suddilive.in/archives/12854