ಸ್ಥಳೀಯ ಸುದ್ದಿಗಳು

ಹಾವೇರಿಯಲ್ಲಿ ಈಗಲೂ ಕಾಲ ಮಿಂಚಿಲ್ಲ-ಜಾರಕಿಹೊಳಿ

ಪರೋಕ್ಷವಾಗಿ ಶೆಟ್ಟರ್ ವಿರುದ್ಧ ಅಸಮಾಧಾನ

ಸುದ್ದಿಲೈವ್/ಶಿವಮೊಗ್ಗ

ಪುತ್ರ ಕಾಂತೇಶ್ ಗೆ ಬಿಜೆಪಿಯಿಂದ ಹಾವೇರಿ ಗದಗ ಲೋಕಸಭಾ ಚುನಾವಣೆಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ನಿಗಿನಿಗಿ ಎನ್ನುತ್ತಿರುವ ಮಾಜಿ ಡಿಸಿಎಂ ಈಶ್ವರಪ್ಪನವರನ್ನ ತಣಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳೆ ಭೇಟಿ ನೀಡಿದ್ದಾರೆ.

ಮಲ್ಕೇಶ್ವರ ನಗರದಲ್ಲುರುವ ಮನೆಯಲ್ಲಿ  ಪುತ್ರ  ಕಾಂತೇಶ್ ಜೊತೆನೂ ಮಾತುಕತೆಯನ್ನ ಜಾರಕಿಹೊಳಿ ನಡೆಸಿ ನಂತರ ಮಾಧ್ಯಮಗಳಿಗೆ ಮಾತನಾಡಿದ್ದಾರೆ.   ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ ಎಂದರು.

ಇನ್ನೂ ಕೂಡಾ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಇನ್ನೂ ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇ ಪದೇ ಅನ್ಯಾಯ ಆಗುತ್ತಿದೆ ಎಂದರು.

ಇದನ್ನು ಸರಿಪಡಿಸಬೇಕು.. ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಈಗಲೂ ಕಾಂತೇಶ್ ಗೆ ಹಾವೇರಿ ಟಿಕೇಟ್ ನೀಡಲು ಅವಕಾಶ ಇದೆ ಎಂದ ಜಾರಕಿಹೊಳೆ ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಸ್ಥಳೀಯ ಅಭ್ಯರ್ಥಿಗೆ ಆದ್ಯತೆ ನೀಡಬೇಕು. ಸ್ಥಳೀಯವಾಗಿ ಸಂಜಯ್ ಪಾಟೀಲ್, ಹಾಲಿ ಸಂಸದೆ ಮಂಗಳ ಅಂಗಡಿ ಇದ್ದಾರೆ ಎಂದರು.

ಇದರಿಂದ ಪರೋಕ್ಷವಾಗಿ ಶೆಟ್ಟರ್ ಗೆ ಟಿಕೆಟ್ ಗೆ ವಿರೋಧ ಹೊರ ಹಾಕಿದ ರಮೇಶ್, ಇನ್ನೂ ಶೆಟ್ಟರ ಟಿಕೆಟ್ ಫೈನಲ್ ಆಗಿಲ್ಲ. ನಾವು ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಒತ್ತಾಯ ಮಾಡ್ತಿದ್ದೇವೆ. ಸ್ಥಳೀಯರಿಗೆ ಟಿಕೇಟ್ ಸಿಗುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ-https://suddilive.in/archives/10760

Related Articles

Leave a Reply

Your email address will not be published. Required fields are marked *

Back to top button