ರಾಜಕೀಯ ಸುದ್ದಿಗಳು
ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ
ಸುದ್ದಿಲೈವ್/ಭದ್ರಾವತಿ ಜ 11
ನಗರಸಭಾ ಸದಸ್ಯ ಕಾಂತರಾಜ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.
ನಗರಸಭಾ ಚುನಾವಣೆಯಲ್ಲಿ 28 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಗೊಂಡಿರುವ ಕಾಂತರಾಜ್ ನಗರಸಭಾ ಸ್ಥಾಯಿಸಮಿತಿ ಅಧ್ಯಕ್ಷ ರಾಗಿ ಅಯ್ಕೆಯಾಗಿದ್ದಾರೆ.
ಅಧಿಕಾರ ಹಂಚಿಕೆ ಸಂಧರ್ಭದಲ್ಲಿ ನಡೆದ ಮಾತುಕತೆಯಂತೆ ಈ ಹಿಂದೆ ಅಧ್ಯಕ್ಷರಾಗಿದ್ದ ಸುಧೀಪ್ ರವರ ಅಧಿಕಾರಾವಧಿ ಮುಗಿದ ಕಾರಣ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಅಧಿಕಾರ ವಹಿಸಿಕೊಂಡರು.
ಈ ಸಂಧರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಬಿ.ಕೆ. ಮೋಹನ್ ಸೇರಿದಂತೆ ನಗರಸಭಾ ಸದಸ್ಯರು ಶುಭ ಹಾರೈಸಿದರು. ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇದನ್ನೂ ಓದಿ-https://suddilive.in/archives/6598