ರಾಜಕೀಯ ಸುದ್ದಿಗಳು
ಏ.18 ಮತ್ತು 19 ರಂದು ಕುಡಿಯುವ ನೀರು ವ್ಯತ್ಯಯವಾಗುವುದಿಲ್ಲ
ಸುದ್ದಿಲೈವ್/ಶಿವಮೊಗ್ಗ
ವಿದ್ಯುತ್ ಪೂರೈಕೆಯ ನಿಲುಗಡೆ ಹಿನ್ನಲೆಯಲ್ಲಿ ಏ.18 ಮತ್ತು 19 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಿಂದ ನಗರಕ್ಕೆ ಸರಬರಾಜು ಆಗುವ ಕುಡಿಯುವ ನೀರು ಪೂರೈಕೆಯಲ್ಲಿಯಾವುದಿಲ್ಲ ಎಂದು ಪ್ರಕಟವಾಗಿತ್ತು.
ಆದರೆ ಇದೀಗ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಮೆಸ್ಕಾಂ ಸ್ಪಷ್ಟಪಡಿಸಿದ ಕಾರಣ ಕುಡಿಯುವ ನೀರಿನಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದ್ದು, ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ-https://suddilive.in/archives/13022