ನಾಳೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗಕ್ಕೆ-ಪ್ರತಿಭಟನೆಯ ಬಿಸಿ ತಗುಲಿದೆಯಾ ಮಾಜಿ ಸಿಎಂಗೆ?
ಸುದ್ದಿಲೈವ್/ಶಿವಮೊಗ್ಗ
ನಾಳೆ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಶಿವಮೊಗ್ಗಕ್ಕೆ ಬರ್ತಾ ಇದ್ದಾರೆ. ಸಂಸದ ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಗೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.
ನಾಳೆ ಬೆಳಿಗ್ಗೆ 8-30 ಕ್ಕೆ ಗಂಟೆಗೆ ಬೆಂಗಳೂರಿನ ಹೆಚ್ ಎಎಲ್ ನಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಬೆಳಿಗ್ಗೆ 9-30 ಕ್ಕೆ ಶಿವಮೊಗ್ಗಕ್ಕೆ ಬರುತ್ತಿದ್ದು 10-30ರ ಸಮಯದಲ್ಲಿ ನಾಮಪತ್ರ ಸಲ್ಲಿಕೆಗೆ ಆಗಮಿಸುತ್ತಿದ್ದಾರೆ.
ಇವರ ಜೊತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಬೈರತಿ ಬಸವರಾಜ್, ಎಂ.ಟಿ.ಬಿ. ನಾಗರಾಜ್, ಹರತಾಳ ಹಾಲಪ್ಪ, ಕುಮಾರ ಬಂಗಾರಪ್ಪ, ಮಾಳವೀಕ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ಮಾಜಿ ಸಿಎಂಗೆ ಪ್ರತಿಭಟನೆ ಬಿಸಿ ತಗುಲಿದೆಯಾ?
ಮಾಜಿ ಸಿಎಂ ಕುಮಾರ ಸ್ವಾಮಿಯವರು ಗ್ಯಾರೆಂಟಿಯಿಂದ ತಪ್ಪು ದಾರಿಗೆ ಹೋಗುತ್ತಿದ್ದಾರೆ ಎಂಬ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು. ಮಂಡ್ಯದಲ್ಲಿ ಅವರ ಕಾರ್ಯಕ್ರಮದಲ್ಲಿ ಬಿಸಿ ಮುಟ್ಟಿತ್ತು. ಮಾಜಿ ಪ್ರಧಾನಿ ದೇವೇಗೌಡರ ಕಾರ್ಯಕ್ರಮಕ್ಕೂ ಕಾಂಗ್ರೆಸ್ ಮಹಿಳೆಯರು ಪ್ರತಿಭಟಿಸಿದ್ದರು.
ಆದರೆ ನಾಳೆಯ ಮೆರವಣಿಗೆಯಲ್ಲಿ ಮಹಿಳೆಯರ ಪ್ರತಿಭಟನೆ ನಡೆಯಲಿದೆಯಾ ಎಂಬುದರ ಬಗ್ಗೆ ಇದುವರೆಗೂ ಮಾಹಿತಿ ಇಲ್ಲ. ನಾಳೆ ಬೆಳಿಗ್ಗೆ ಏನಾಗಲಿದೆ ಕಾದು ನೋಡಬೇಕಿದೆ.
ಇದನ್ನೂ ಓದಿ-https://suddilive.in/archives/13049