ಕ್ರೈಂ ನ್ಯೂಸ್

ಭದ್ರಾವತಿ ಅಂಡರ್ ಪಾಸ್ ರೈಲ್ವೆ ಬ್ರಿಡ್ಜ್ ಗೆ ಲಾರಿ ಡಿಕ್ಕಿ-ಎರಡು ರೈಲುಗಳ ಸಂಚಾರ ವಿಳಂಭ

ಸುದ್ದಿಲೈವ್/ಭದ್ರಾವತಿ

ಭದ್ರಾವತಿಯ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಲಾರಿಯೊಂದು  ರೈಲ್ವೆ ಹಳಿ ಹಾಗೂ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹಳಿಗಳು ಏರುಪೇರಾಗಿದ್ದರಿಂದ ಇಂದು ಬೆಳಿಗ್ಗೆ ಸಂಚರಿಸುತ್ತಿದ್ದ ಎರಡು ರೈಲುಗಳ ಸಂಚಾರದಲ್ಲಿ ವಿಳಂಭವಾಗಿದೆ. ಹಾಗಾಗಿ ಎರಡು ರೈಲುಗಳು ಸುಮಾರು ಎರಡು ಗಂಟೆ ತಡವಾಗಿ ಸಂಚಾರ ಆರಂಭಸಿವೆ.

ಅಪಘಾತ ಸಂಭವಿಸಿದ್ದು ಹೇಗೆ?

ಭದ್ರಾವತಿ ಪಟ್ಟಣದ ರೈಲ್ವೆ ಅಂಡರ್‌ಪಾಸ್‌ ಮುಂದೆ ನಿಗದಿಗಿಂತಲೂ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್‌ ಹಾಕಲಾಗಿದೆ. ರಾತ್ರಿ ಈ ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ ಹೊಡೆದಿದೆ.
ಬ್ಯಾರಿಕೇಡ್‌ ಮುರಿದು ರೈಲ್ವೆ ಹಳಿಗೆ ಹೊಡೆದುಕೊಂಡಿದ್ದರಿಂದ  ಹಳಿಗಳು ಎರುಪೇರಾಗಿ ತಾಂತ್ರಿಕ ದೋಷ ಉಂಟಾಗಿತ್ತು. ಕೂಡಲೆ ರೈಲ್ವೆ ಸಿಬ್ಬಂದಿ ಹಳಿ ರಿಪೇರಿ ಕಾಮಗಾರಿ ನಡೆಸಿದ್ದಾರೆ.ಇದರಿಂದ ಶಿವಮೊಗ್ಗ – ಭದ್ರಾವತಿ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.

ಕಾದು ಕಾದು ಹೈರಾಣಾದ ಪ್ರಯಾಣಿಕರು

ಹಳಿ ರಿಪೇರಿ ಕಾರ್ಯದ ಹಿನ್ನೆಲೆ ಎರಡು ರೈಲುಗಳು ವಿಳಂಬವಾಗಿ ಸಂಚರಿಸುತ್ತಿವೆ. ಬೆಳಗ್ಗೆ 4.45ಕ್ಕೆ ಶಿವಮೊಗ್ಗ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಬೆಳಗ್ಗೆ 6.45ಕ್ಕೆ ತಲುಪಿದೆ. ಅಲ್ಲಿಯವರೆಗೂ ಈ ರೈಲು ಭದ್ರಾವತಿ ನಿಲ್ದಾಣದಲ್ಲಿ ನಿಂತಿತ್ತು.

ಇನ್ನು, ಶಿವಮೊಗ್ಗದಿಂದ ಬೆಳಗ್ಗೆ 5.15ಕ್ಕೆ ಹೊರಡಬೇಕಿದ್ದ ಬೆಂಗಳೂರು ಜನಶತಾಬ್ದಿ ರೈಲು ಸುಮಾರು ಬೆಳಗ್ಗೆ 6.355ಕ್ಕೆ ಹೊರಟಿದೆ. ವಿಳಂಬಕ್ಕೆ ಕಾರಣ ಗೊತ್ತಾಗದೆ ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.

ಇದನ್ನೂ ಓದಿ-https://suddilive.in/archives/13067

Related Articles

Leave a Reply

Your email address will not be published. Required fields are marked *

Back to top button