ಕ್ರೈಂ ನ್ಯೂಸ್

ಚನ್ನಗಿರಿ-ಯುವಕನಿಗೆ ಚಾಕು ಇರಿತ, ಮೆಗ್ಗಾನ್ ಗೆ ದಾಖಲು

ಸುದ್ದಿಲೈವ್/ಶಿವಮೊಗ್ಗ

ಚನ್ನಗಿರಿಯ ನಲ್ಲೂರಿನಲ್ಲಿ ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನಿಗೆ ಚಾಕುವಿನಿಂದ‌ ಇರಿದ‌ ಘಟನೆಯಲ್ಲಿ ಗಾಯಗೊಂಡ ಯುವಕನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಯುವಕರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದಿತ್ತು. ಹಿಂದೂ ಯುವಕರಿಗೆ ಚಾಕು ಇರಿತವಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯ ಗಲಾಟೆಯಾಗಿದೆ.

ಹನುಮಂತ, ಗೋಪಿ ಎಂಬುವರಿಗೆ  ಮುಸ್ಲಿಂ ಯುವಕರ ಗುಂಪು ಚಾಕು ಇರಿದಿತ್ತು. ಚಾಕು ಇರಿತದ ವೇಳೆ ಯುವಕರಿಗೆ ಗಂಭೀರ ಗಾಯವಾಗಿದೆ. ಗುರಾಯಿಸಿ ನೋಡಿದ್ರು ಅನ್ನೋ ಕಾರಣಕ್ಕೆ ಚಾಕು ಇರಿಯಲಾಗಿದೆ.

ಎರಡು ಗುಂಪುಗಳ ನಡುವೆ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರಿಗೆ ಶಿವಮೊಗ್ಗಕ್ಕೆ ಕರೆದುಕೊಂಡು ಚಿಕಿತ್ಸೆ ನೀಡಲಾಗಿದೆ. ಗೋಪಿ ಶಿವಮೊಗ್ಗದ ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.

ಇದನ್ನೂ ಓದಿ-https://suddilive.in/archives/13188

Related Articles

Leave a Reply

Your email address will not be published. Required fields are marked *

Back to top button