ಸ್ಥಳೀಯ ಸುದ್ದಿಗಳು

ಈಶ್ವರಪ್ಪನವರು ಅಪೇಕ್ಷೆ ಪಟ್ಟಂತೆ ಉಚ್ಚಾಟನೆ ಆಗಿದೆ-ಬಿಎಸ್ ವೈ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಈಶ್ವರಪ್ಪನವರನ್ನ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಕ್ರಮ‌ ಜರುಗಿಸಿದೆ ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರದ ಮಾಧ್ಯಮಗಳ ಜೊತೆ ಮಾತನಾಡಿ, ಈಶ್ವರಪ್ಪನವರು ಅಪೇಕ್ಷೆ ಪಟ್ಟಂತೆ ಉಚ್ಚಾಟನೆ ಆಗಿದೆ. ಅದರಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ರಾಜ್ಯದಲ್ಲಿ ಪೂರಕ ವಾತಾವರಣವಿದೆ. 28 ಸ್ಥಾನಕ್ಕೆ 28 ಸ್ಥಾನವನ್ನ ಗೆಲ್ಲಲಿದ್ದೇವೆ. ಮೋದಿ ಪರ ಅಲೆ ಬಿಜೆಪಿಯನ್ನ ಹೆಚ್ಚು ಸ್ಥಾನ ಮಡೆಯಲಿದ್ದೇವೆ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಂದ್ರ ಮಾತನಾಡಿ, ಕಾರ್ಯಕರ್ತರು ಹೆಚ್ಚಿನ ಶ್ರಮ ಪಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿ ಗೆ ಪೂರಕವಾದ ವಾತವರಣವಿದೆ. ಜನ ಆಶೀರ್ವಾದ ಮಾಡಲಿದ್ದಾರೆ ಎಂದರು.

ಮಾಜಿ ಡಿಸಿಎಂ ಈಶ್ವರಪ್ಪ ಅವರನ್ನ ಉಚ್ಚಾಟನೆಗೂ ಮುನ್ನ ಅವರಿಗೆ ಸಾಕಷ್ಟು ಅವಕಾಶ ನೀಡಲಾಗಿತ್ತು. ಪ್ರತಿ ರಾಜ್ಯದಲ್ಲಿ ಇರುವ ಶಿಸ್ತು ಸಮತಿ ನಮ್ಮ ರಾಜ್ಯದಲ್ಲಿ ಲಿಂಗರಾಜ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿದೆ. ತಿದ್ದಿಕೊಳ್ಳದ ಹಿನ್ನಲೆಯಲ್ಲಿ ಶಿಸ್ತು ಕ್ರಮ ಜರುಗಿದೆ ಎಂದರು.

ರಾಹುಲ್ ಗಾಂಧಿ ಬಂದರೂ ರಾಜ್ಯದಲ್ಲಿ ಯಾವ ಪರಿಣಾಮ ಬೀರಲ್ಲ. ಪ್ರಿಯಾಂಕ ಗಾಂಧಿ ಬಂದರೂ ರಾಜ್ಯದಲ್ಲಿ ಪರಿಣಾಮ ಬೀರಲ್ಲ ಕಾಂಗ್ರೆಸ್ ಗೆ ಯಾವ ಅಭನೂ ಆಗೊಲ್ಲ ಎಂದರು.‌

ಇದನ್ನೂ ಓದಿ-https://suddilive.in/archives/13453

Related Articles

Leave a Reply

Your email address will not be published. Required fields are marked *

Back to top button