7 ಕೆಜಿ ಗಾಂಜಾ ವಶ
ಸುದ್ದಿಲೈವ್/ಶಿವಮೊಗ್ಗ
ಗಾಂಜಾ ಸಾಗಾಟ ಮಾಡುವ ವೇಳೆ ಭದ್ರಾವತಿ ಹೊಸಮನೆ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾವನ್ನ ಮತ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನ ವಶಕ್ಕೆ ಪಡೆಯಲಾಗಿದೆ.
ನಿನ್ನೆ ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದ ಕಡೆಗೆ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಲಾಗಿತ್ತು.
ಎಸ್ಪಿ ಮಿಥುನ್ ಕುಮಾರ್ ಜಿ ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಹಾಗೂ ಕಾರಿಯಪ್ಪ ಎ ಜಿರವರ ಮಾರ್ಗದರ್ಶನದಲ್ಲಿ ಭದ್ರಾವತಿ ಡಿವೈಎಸ್ಪಿ ನಾಗರಾಜ್ ಸಿಪಿಐ ಶ್ರೀ ಶೈಲ ಕುಮಾರ್ ರವರ ಮೇಲ್ವಿಚಾರಣೆಯಲ್ಲಿ, ಹೊಸಮನೆ ಪಿಐ ಕೃಷ್ಣ ಕುಮಾರ್ ಬಿ ಮಾನೆ ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಗಾಂಜಾ ಸಾಗಾಟ ಮಾಡುತ್ತಿದ್ದ ಸತ್ಯಸಾಯಿ ನಗರದ ನಿವಾಸಿ ಹುಸೇನ್ ಬಿ (35) ಈಕೆಯನ್ನು ವಶಕ್ಕೆ ಪಡೆದು ಅಂದಾಜು ಮೌಲ್ಯ 4,50,000 /- ರೂ ಗಳ 7ಕೆಜಿ 590 ಗ್ರಾಂ ಒಣ ಗಾಂಜಾವನ್ನು ಅಮಾನತುಪಡಿಸಿಕೊಳ್ಳಲಾಯಿತು. ಆರೋಪಿತಳ ವಿರುದ್ಧ ಹೊಸಮನೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0072/2024 ಕಲಂ 20 (ಬಿ) ii (ಬಿ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ-https://suddilive.in/archives/13460