ಬರೆದಿಟ್ಟುಕೊಳ್ಳಿ… ಇವತ್ತಲ್ಲ, ನಾಳೆ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗೋದು ಗ್ಯಾರೆಂಟಿ-ಈಶ್ವರಪ್ಪ ಪುನರುಚ್ಚಾರ

ಸುದ್ದಿಲೈವ್/ಶಿವಮೊಗ್ಗ

ಪಾರಂಪರಿಕ/legacy ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಅರಿಶಿಣ-ಕುಂಕುಮ ಬಳಸಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕೆಂಡಕಾರಿದ್ದಾರೆ. ಇದು ಹಿಂದೂ ವಿರೋಧಿ ಸರ್ಕಾರ ಎಂದು ಗುಡುಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಸಾಯನಿಕ ಪದಾರ್ಥ ಇರುವ ಅರಿಶಿಣ – ಕುಂಕುಮ ಬಳಸಬಾರದು ಎಂದು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ ಬಹಳ ಜಾಣತನದಿಂದ ಸುತ್ತೋಲೆ ಹೊರಡಿಸಿದೆ. ಹಿಂದೂಗಳ ವಿರುದ್ಧ ಏನೇನು ಮಾಡಬೇಕೋ ಅವೆಲ್ಲವನ್ನೂ ಮಾಡುತ್ತಿದೆ ಎಂದು ಗುಡುಗಿದ್ದಾರೆ.
ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಡಿಕೆಶಿ ಹೇಳಿಕೆ ವಿಚಾರವನ್ನ ಪ್ರಸ್ತಾಪಿಸಿ ಮಾತನಾಡಿದ ಈಶ್ವರಪ್ಪ ಯಾಕೆ ಕಾಂಗ್ರೆಸ್ ಸರ್ಕಾರ ಬೀಳಿಸಬಾರದು?ಬಿಜೆಪಿ ಸರ್ಕಾರ ಯಾಕೆ ಬರಬಾರದು!?ಡಿಕೆ ಶಿವಕುಮಾರ್ ಬೆಳಗಾವಿಗೆ ಹೋದರೆ ಒಬ್ಬ ಶಾಸಕ ಇಲ್ಲ ಎಂದಾದರೆ ಏನು ಮೆಸೆಜ್ ಹೋಗುತ್ತಿದೆ. ಕಾಂಗ್ರೆಸ್ ಸರ್ಕಾರ ಬೇಡ ಎಂದು ಅವರ ಶಾಸಕರೇ ತೀರ್ಮಾನ ಮಾಡಿದ್ದಾರೆ.ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದರು.
ಸತೀಶ್ ಜಾರಕಿಹೊಳಿ ಶಾಸಕರನ್ನು ಫಾರೀನ್ ಗಾದರೂ ಕರೆದುಕೊಂಡು ಹೋಗಲಿ, ಎಲ್ಲಿಗಾದರೂ ಕರೆದುಕೊಂಡು ಹೋಗಲಿ, ಒಟ್ಟಾರೆ ಅವರೆಲ್ಲರೂ ಈ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವುದು ನಿಜ ಎಂದು ಹೇಳಿದರು.
ಡಿಸಿಎಂ ಡಿಕೆಶಿ ವಿರುದ್ದ ಸಿಬಿಐ ತನಿಖೆ ನಡೆಸುತ್ತಿರುವ ವುಚಾರವನ್ನೂ ಪ್ರಸ್ತಾಪಿಸಿದ ಈಶ್ವರಪ್ಪ, ಡಿಕೆಶಿ ಎಷ್ಟರಮಟ್ಟಿಗೆ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಅಂತಾ ಎಲ್ಲರಿಗೂ ಗೊತ್ತಿದೆ. ಇದೇ ಕೇಸ್ ವಿಚಾರಕ್ಕೆ ಜೈಲಲ್ಲಿದ್ದರು. ಜೈಲಲ್ಲಿ ಇರಲಿಲ್ವಾ ಅವರು, ಈಗ ಬೇಲ್ ಮೇಲೆ ಇಲ್ವಾ? ಬರೆದಿಟ್ಟುಕೊಳ್ಳಿ ಇವತ್ತಲ್ಲ, ನಾಳೆ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಜೈಲಿನಿಂದ ಹೊರ ಬಂದ ಡಿಕೆಶಿ ಕೇಸಿನಿಂದ ಖುಲಾಸೆಯಾದಂತೆ ವರ್ತಿಸಿದ್ದರು.ಡಿ.ಕೆ.ಶಿ. ಭಂಡತನದಿಂದ ವರ್ತಿಸುತ್ತಿದ್ದಾರೆ.ನನ್ನ ಕೇಸು ಕೋರ್ಟಿನಲ್ಲಿದೆ ಎಂದು ಸೌಜನ್ಯದಿಂದ ಇರಲು ಬರುವುದಿಲ್ಲವಾ?ಜೈಲಿನಿಂದ ಹೊರಬಂದಾಗ ವಿರೋಚಿತವಾಗಿ ಮೆರವಣಿಗೆ ನಡೆಸಿದ್ದರು.ಈಗ ಸಿಬಿಐ ಮತ್ತೆ ತನಿಖೆ ನಡೆಸಲಿದೆ ಎಂದರು.
ಅಕ್ರಮ ಹಣ ಸಿಕ್ಕಾಗ ತನಿಖೆ ಮಾಡುತ್ತೆವೆಂದು ಹೇಳಬೇಕು.ಆದರೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಏನು ಬೇಕಾದರೂ ಉತ್ತರ ಕೊಡುತ್ತಾರೆ. ಇದು ಭ್ರಷ್ಠಾಚಾರದ ಬಗ್ಗೆ ಕಾಂಗ್ರೆಸ್ ಗೆ ಇರುವ ನಿಲುವು ಎಂದು ಗುಡುಗಿದರು.
ಇದನ್ನೂ ಓದಿ-https://suddilive.in/archives/1493
