ಸ್ಥಳೀಯ ಸುದ್ದಿಗಳು

ಆಗುಂಬೆಯಲ್ಲಿ ತಪ್ಪಿದ ಭಾರಿ ದುರಂತ

ಸುದ್ದಿಲೈವ್/ಆಗುಂಬೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಘಾಟಿಯಲ್ಲಿ ಸಂಭವಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ಶಾಲೆ ಮಕ್ಕಳು ಸೇರಿದಂತೆ 30 ಮಂದಿಯಿದ್ದ ಸ್ಕೂಲ್​ ಬಸ್​ವೊಂದು ಆಗುಂಬೆಯ ಘಾಟಿ ತಿರುವಿಗೆ ಡಿಕ್ಕಿ ಹೊಡೆದು ಅರ್ಧ ಮುಂದಕ್ಕೆ ಹೋಗಿದೆ. ಅಲ್ಲಿಯೇ ಬಸ್ ನಿಂತಿದ್ದರಿಂದ ಯಾರಿಗೂ ಅಪಾಯವಾಗಲಿಲ್ಲ. ಹಾಗೊಂದು ವೇಳೆ ಬಸ್ ಕೆಳಕ್ಕೆ ಬಿದ್ದಿದ್ದರೇ ಪರಿಣಾಮ ಹೇಳತೀರದಂತಾಗುತ್ತಿತ್ತು.

ಬೆಂಗಳೂರಿಂದ ಪ್ರವಾಸ ಬಂದಿದ್ದ ಶಾಲಾ ವಾಹನವೊಂದು ಶೃಂಗೇರಿಯಿಂದ ಕೊಲ್ಲೂರಿಗೆ ಹೋಗುತ್ತಿತ್ತು. ಈ ಮಾರ್ಗದಲ್ಲಿ ಆಗುಂಬೆ ಘಾಟಿಯ ಮೊದಲ ಕ್ರಾಸಿನಲ್ಲಿ ಅಪಘಾತವಾಗಿದೆ. ಆಗುಂಬೆ ಘಾಟಿಯ ಸೂರ್ಯಾಸ್ತಮಾನ ಜಾಗಕ್ಕೂ ಮೊದಲು ಸಿಗುವ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಸ್ಕೂಲ್ ಬಸ್​, ಆಗುಂಬೆ ಗೇಟ್ ದಾಟಿಕೊಂಡು ಮುಂದಕ್ಕೆ ಸಾಗಿದೆ. ಅಲ್ಲಿಂದ ತಿರುವಿನಲ್ಲಿ ವೇಗವಾಗಿದ್ದರಿಂದ ಬಸ್​ ಕಂಟ್ರೋಲ್​ಗೆ ಸಿಗದೇ ತಿರುವಿನಂಚಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬಸ್​ನ ಅರ್ಧ ಭಾಗ ಮುಂದಕ್ಕೆ ಹೋಗಿ ನಿಂತಿದೆ.

ಇನ್ನೂ ಘಟನೆ ಬೆನ್ನಲ್ಲೆ ಅಲ್ಲಿದ್ದವರೆಲ್ಲಾ ಬಸ್​ನಲ್ಲಿರುವವರನ್ನ ಸುರಕ್ಷಿತವಾಗಿ ಕೆಳಕ್ಕೆ ಇಳಿಸಿದ್ದಾರೆ. ಅಲ್ಲದೆ ನಡೆದ ಘಟನೆಯನ್ನು ನೆನೆದು ಸಣ್ಣದರಲ್ಲಿ ಆಯ್ತು ದೇವರು ದೊಡ್ಡವನು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ-https://suddilive.in/archives/2016

Related Articles

Leave a Reply

Your email address will not be published. Required fields are marked *

Back to top button