ಸ್ಥಳೀಯ ಸುದ್ದಿಗಳು

ಶಿವಾನಂದ ಪಾಟೀಲರಿಂದ ಪರಿಶೀಲನಾ ಸಭೆ

ಸುದ್ದಿಲೈವ್/ಶಿವಮೊಗ್ಗ

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ 2023 ನ್ನು ಪರಿಶೀಲಿಸಿ ಸದನಕ್ಕೆ ವರದಿಯನ್ನು ಸಲ್ಲಿಸಲು ರಚಿಸಲಾಗಿರುವ ಪರಿಶೀಲನಾ ಸಮಿತಿಯ ಅಧ್ಯಕ್ಷರು ಹಾಗೂ ಜವಳಿ , ಕಬ್ಬು,ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ .ಎಸ್ ಪಾಟೀಲ್ ಹಾಗೂ ಪರಿಶೀಲನಾ ಸಮಿತಿಯ ಸದಸ್ಯರು, ಅಧಿಕಾರಿಗಳು ಶಿವಮೊಗ್ಗ ಜಿಲ್ಲಾ ಎಪಿಎಂಸಿ ಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡರು.

ಹಾಗೂ ಅಡಿಕೆ ವರ್ತಕರ ಸಂಘ ಮತ್ತು ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ವಿಧೇಯಕ ತಿದ್ದುಪಡಿ ಸಂಬಂಧ ಸಲಹೆಗಳನ್ನು ಪಡೆದುಕೊಂಡರು. ನಂತರ ಎಪಿಎಂಸಿ ವರ್ತಕರ ಸಹಕಾರ ಬ್ಯಾಂಕ್ ಗೆ ಭೇಟಿ ನೀಡಿ ಚರ್ಚಿಸಿದರು.

Related Articles

Leave a Reply

Your email address will not be published. Required fields are marked *

Back to top button