ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಿಸಿ ಚಪ್ಪಾಳೆ ತಟ್ಟಿಸುದ್ರಾ ಮೇಷ್ಟ್ರು…! ವಾಟ್ ಇಸ್ ದಿಸ್ ಡಿಡಿಪಿಐ?
ಸುದ್ದಿಲೈವ್/ಶಿವಮೊಗ್ಗ
ಶಿಕ್ಷಣ ಸಚಿವರ ಕ್ಷೇತ್ರದಲ್ಲಿ ಅನ್ಯ ಜಾತಿಯವರಿಗೆ ರಕ್ಷಣೆ ಇಲ್ಲವಾ ಎಂಬ ಅನುಮಾನಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಮೊಟ್ಟೆ ತಿನ್ನದ ಜಾತಿಯ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿ ನಂತರ ಸಬ್ಬಾಷ್ ಗಿರಿಯಂತೆ ಚಪ್ಪಾಳೆ ತಟ್ಟಿಸಿ ಪ್ರೋತ್ಸಹಿಸಿರುವ ಆರೋಪವೂ ಕೇಳಿ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸುತಿದ್ದಾರೆ.
ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್ ಆರೋಪಿಸಿದ್ದಾರೆ.
ಇಂತಹ ಘಟನೆಗಳು ಮಕ್ಕಳ ಗಂಭೀರ ಪರಿಣಾಮ ಬೀರುತ್ತದೆ ಕೂಡಲೇ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಲು ಒತ್ತಾಯಿಸಿದ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಾಸಕರು , ಜಿಲ್ಲಾ ಉಪ ನಿರ್ದೇಶಕರು ,ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ , ಶಿಲ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಪೋಷಕರಾದ ಶ್ರೀಕಾಂತ್ ಹೇಳಿದರು.
ಇದನ್ನೂ ಓದಿ-https://suddilive.in/archives/3491