ಸ್ಥಳೀಯ ಸುದ್ದಿಗಳು

ನಾಳೆ ಮತ್ತು ನಾಡಿದ್ದು ಕರೆಂಟ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.29ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕøತಿ ಭವನ, ನಾಗರಾಜಪುರ ಎಕ್ಸ್ಟೆನ್ಷನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನ.28 ; ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮಾದರಿ ಉಪವಿಭಾಗ ಯೋಜನೆಯಡಿಯಲ್ಲಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನು ಕಳಚುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.28ರ ಬೆಳಗ್ಗೆ 9.30 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ರಾಘವೇಂದ್ರ ಸ್ವಾಮಿ ಮಠ, ಹೊಸ ಸರ್ಜಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/3801

Related Articles

Leave a Reply

Your email address will not be published. Required fields are marked *

Back to top button