ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರ ನುಂಗಿದ ಹಸು
ಸುದ್ದಿಲೈವ್/ಹೊಸನಗರ.
ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ಹಸುವೊಂದು ನುಂಗಿದ ಪರಿಣಾಮ, ಪಶು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಬಂಗಾರದ ಸರವನ್ನು ಹೊರ ತೆಗೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಮತ್ತಿಮನೆ ಗ್ರಾಮದ ಶ್ಯಾಮ ಉಡುಪ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಹಸು ಬಂಗಾರದ ಸರ ನುಂಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಗೋಪೂಜೆ ನಂತರ ಇಟ್ಟಿದ್ದ ಸರ ನಾಪತ್ತೆಯಾದಾಗ ಕುಟುಂಬಸ್ಥರು ಹುಡುಕಾಡಿದ್ದಾರೆ. ನಂತರ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಖಚಿತ ಪಡಿಸಿಕೊಂಡಿದ್ದಾರೆ.
ಬಂಗಾರದ ಸರ ಹೋದರೆ ಹೋಗಲಿ ಎಂದು ಕುಟುಂಬಸ್ಥರು ಸುಮ್ಮನಿದ್ದರು. ಆದರೆ ಬಂಗಾರದ ಸರ ನುಂಗಿದ ನಂತರ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ನಂತರ ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂಬ ಆತಂಕದಿಂದ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಪಶು ವೈದ್ಯ ಡಾ.ಆನಂದ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ಹಸುವಿನ ದೇಹದಿಂದ ಸರ ಹೊರ ತೆಗೆದಿದ್ದಾರೆ. ಹಸು ಸಹ ಆರೋಗ್ಯವಾಗಿದೆ.
ಇದನ್ನೂ ಓದಿ-https://suddilive.in/archives/3819