ರಾಷ್ಟ್ರೀಯ ಸುದ್ದಿಗಳು
ಕಚೇರಿಗೆ ವಿಜೇಂದ್ರ ಭೇಟಿ
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗಕ್ಕೆ ಬಿ.ವೈ.ವಿಜಯೇಂದ್ರ ಭೇಟಿ ಹಿನ್ನಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಭೇಟಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.
ಈ ವೇಳೆ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ವಾದ್ಯಮೇಳದ ಜೊತೆ ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಗಿದೆ. ಮಾಧ್ಯಮಗಳಿಗೆ ಮಾತನಾಡಿದ ರಾಜ್ಯಾಧ್ಯಕ್ಷ ವಿಜೇಂದ್ರ, ಎಲ್ಲರೂ ಒಟ್ಟಾಗಿ ಒಂದಾಗಿ ಪಕ್ಷ ಕಟ್ಟಬೇಕಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆ ನಮ್ಮ ಸವಾಲಾಗಿದೆ. ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈ ಬಲಪಡಿಸಬೇಕಿದೆಅದಕ್ಕಾಗಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ಇದನ್ನೂ ಓದಿ-https://suddilive.in/archives/3886