ರಾಜಕೀಯ ಸುದ್ದಿಗಳು

ಕರವೇ ಯುವಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ

ಸುದ್ದಿಲೈವ್/ಶಿವಮೊಗ್ಗ

ಇಲ್ಲಿನ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ ರಾಜ್ಯಾಧ್ಯಕ್ಷರಾದ ಶ್ರೀ ಹರೀಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್ಎಸ್ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ ರವರು ಹಾಗೂ ಶಾಸಕರಾದ ಚನ್ನಬಸಪ್ಪ ನವರು ಗ್ರಾಮಾಂತರ ಶಾಸಕರಾದ ಶಾರದಾ ಪುರ್ಯನಾಯ್ಕ್ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ಕಾಂಗ್ರೆಸ್ ಮುಖಂಡರಾದ ಶ್ರೀಕಾಂತ ಎಸ್ ಮಹಮ್ಮದ್ ಶಫಿವುಲ್ಲಾ ಅಧ್ಯಕ್ಷರು ವರ್ಕ್ ಬೋರ್ಡ್ ಸಲಹಾ ಸಮಿತಿ ಹೊಳೆ ಹೊನ್ನೂರ್ ಅಧ್ಯಕ್ಷರಾದ ಹನುಮಂತು ಹಾಗೂ ಸ್ಥಳೀಯ ಕಾರ್ಪೊರೇಟರ್ ಆದ ಮಂಜುಳಾ ಶಿವಣ್ಣ ಭಾಗವಹಿಸಲಿದ್ದಾರೆ

ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀ ಟಿ.ಎಸ್ ಆನಂದ್ ರೈಲ್ವೆ ಇಲಾಖೆ ಶಿವಪ್ಪ ಸಂಗಣ್ಣನವರ್ ಪತ್ರಕರ್ತ ಸಾಹಿತಿ ಗಾರಾ ಶ್ರೀನಿವಾಸ್ ಕಾನೂನು ಸಲಹೆಗಾರರ ಅನಿಲ್ ಕುಮಾರ್ ಹಾಗೂ ಸಮಾಜ ಸೇವಕರಾದ ಚಿರಂಜೀವಿ ಬಾಬು ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನಿ ಮಾಡಲಾಗುವುದು ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಂ ಮಲೋಡಿ ಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ತಿಳಿಸಿದ್ದಾರೆ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಕೋರಿದೆ.

Related Articles

Leave a Reply

Your email address will not be published. Required fields are marked *

Back to top button