ಶಿಕ್ಷಣ ಸಚಿವ ಮಧುಬಂಗಾರಪ್ಪ ವಿಶ್ವಾಸ ಇರಲಿ ಎಂದಿದ್ದೇಕೆ?
ಸುದ್ದಿಲೈವ್/ಶಿವಮೊಗ್ಗ
ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರದಲ್ಲಿ ಮಾಧ್ಯಮದಲ್ಲಿ ಬಿತ್ತರವಾಗುತ್ತಿದೆ. ನನಗೂ ಈ ಬಗ್ಗೆ ಮಾಹಿತಿ ಬಂದಿದೆ.ಯಾವುದನ್ನು ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸಾಗರದಲ್ಲಿ ಅವರು ಮಾಧ್ಯಮಗಳಿಗೆ ಮಾತನಾಡಿ, ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ. ಶಾಲೆಗಳಿಗೆ ರಕ್ಷಣೆ ಕೊಡಲು ನಾನು ಮಾತನಾಡಿದ್ದೇವೆ. ಹಗುರವಾಗಿ ತಗೆದುಕೊಳ್ಳುವ ಮಾತಿಲ್ಲ.ವಿಶ್ವಾಸ ಇಟ್ಟುಕೊಳ್ಳಲಿ ಎಂದರು.
ಯಾರು ಇದನ್ನು ಕಳಿಸಿದ್ದಾರೆ ಅವರನ್ನು ಬಿಡುವ ಪ್ರಶ್ನೆ ಇಲ್ಲ. ಪೋಷಕರು ಧೈರ್ಯವಾಗಿರಬೇಕು. ಮಕ್ಕಳಿಗೆ, ಶಾಲೆಗಳಿಗೆ ರಕ್ಷಣೆ ನೀಡುವುದು ಜವಬ್ದಾರಿ ನಮ್ದು. ಡಿಸಿಎಂ ಅವರು ಸಹ ಶಾಲೆಗೆ ಭೇಟಿ ನೀಡಲಿದ್ದಾರೆ. ನಾನು ಸಹ ಸಂಜೆ ಬೆಂಗಳೂರಿಗೆ ಹೋಗುತ್ತೇನೆ ಎಂದರು.
ಈಗಾಗಲೇ ಅಧಿಕಾರಿಗಳ ಜೊತೆ ಮಾಹಿತಿ ತಗೊಂಡಿದ್ದೇನೆ. ಗೃಹ ಸಚಿವರು ಸಹ ಕರ್ತವ್ಯ ಮಾಡುತ್ತಿದ್ದಾರೆ. ಅವರ ಜೊತೆ ನಾನು ನಿಕಟ ಸಂಪರ್ಕದಲ್ಲಿದ್ದೇನೆ.
ಇದನ್ನ ಓದಿ-https://suddilive.in/archives/4045