ಕ್ರೈಂ ನ್ಯೂಸ್

ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

ಸುದ್ದಿಲೈವ್/ಚಿಕ್ಕಮಗಳೂರು

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ನಿಂದ ದಾಳಿ ನಡೆಸಲಾಗಿದೆ. ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಪಕ್ಕದ ಜಿಲ್ಲೆ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನಲ್ಲಿ ನಡೆದಿದೆ.

ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರ್  ನಾಯಿಗೆ ಬೈದಿದ್ದಾನೆ. ನಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಪಕ್ಕದ ಮನೆಯವನು ಆಸಿಡ್ ನಡೆಸಿದ್ದಾನೆ. ಆಸಿಡ್ ದಾಳಿಗೊಳಗಾದ ಬಳಿಕ ಸುಂದರರಾಜ್ ಪರಿಸ್ಥಿತಿ ಗಂಭೀರವಾಗಿದೆ.

ಎಡಗಣ್ಣಿಗೆ ಗಂಭೀರ ಗಾಯ, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೇಮ್ಸ್ ನಿಂದ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆದಿದೆ.

ನಾಯಿ ಹೆಸರಿನಲ್ಲಿ ಜೇಮ್ಸ್  ಆಸಿಡ್ ಬಾಟಲು ಹಿಡಿದುಕೊಂಡು ಬಂದು ಎರಚಿದ್ದಾನೆ. ಸುಂದರಾಜ್ ಮೇಲಿನ ಸಿಟ್ಟಿನಿಂದ ಆಸಿಡ್ ನಿಂದ ದಾಳಿ ನಡೆದಿದೆ. ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಸುಂದರ್ ರಾಜ್ ರನ್ನ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ-https://suddilive.in/archives/4311

Related Articles

Leave a Reply

Your email address will not be published. Required fields are marked *

Back to top button