ಸ್ಥಳೀಯ ಸುದ್ದಿಗಳು
ಸಾಗರದ ಮಾರಿಕಾಂಬ ದೇವಸ್ಥಾನದ ಮುಂದೆ ಪ್ರತಿಭಟನೆ
ಸುದ್ದಿಲೈವ್/ಸಾಗರ
ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬ ದೇವಸ್ಥಾನದ ಹಾಲಿ ವ್ಯವಸ್ಥಾಪಕ ಸಮಿತಿಯ ವಿರುದ್ಧ ಪ್ರತಿಭಟನೆ ನಡೆದಿದೆ. ವ್ಯವಸ್ಥಾಪಕ ಸಮಿತಿಯ ವಿರುದ್ಧ ದಿಕ್ಕಾರದ ಘೋಷಣೆ ಮತ್ತು ಪ್ಲಕಾರ್ಡ್ ಹಿಡಿದು ಕೂರಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬ ದೇವಸ್ಥಾನ ಮುಂಭಾಗದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಲಾಗಿದೆ. ಹಾಲಿ ಇರುವ ವ್ಯವಸ್ಥಾಪಕ ಸಮಿತಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಡೆಸಲಾಗಿದೆ.
ಹಾಲಿ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ನಾಗೇಂದ್ರ ರವರ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಾಲಿ ಸಮಿತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ.
ಇದನ್ನೂ ಓದಿ-https://suddilive.in/archives/3607